ಸಂಖ್ಯಾ ದೃಷ್ಟಿಯಿಂದ ಕಡಿಮೆಯಿದ್ದರೂ ವಿಪ್ರರನ್ನು ಕಡೆಗಣಿಸಬಾರದು ಎಂದು ಸುಳ್ಯ ತಾಲೂಕು ವಿಪ್ರ ಸಮಾವೇಶದಲ್ಲಿ ಸರ್ಕಾರವನ್ನು ಆಗ್ರಹಿಸಲಾಗಿದೆ.
ಕಲ್ಮಡ್ಕದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು.ಸಮಾರೋಪ ಸಮಾರಂಭದಲ್ಲಿ ಅಖಿಲ ಕರ್ನಾಟಕ ವಿಪ್ರ ಮಹಾಸಭಾದ ಅಧ್ಯಕ್ಷ, ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಶೋಕ್ ಹಾರ್ನಹಳ್ಳಿ ಉಪಸ್ಥಿತರಿದ್ದರು.
ದೇಶದ ಅಭಿವೃದ್ಧಿಗೆ ವಿಪ್ರ ಸಮಾಜದ ಕೊಡುಗೆ ಅಪಾರ. ವಿಪ್ರ ಪ್ರತಿಭೆಗಳನ್ನು ಕಡೆಗಣಿಸುವುದರಿಂದ ದೇಶಕ್ಕೆ ನಷ್ಟವಾಗುತ್ತದೆ. ಆದ್ದರಿಂದ ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು ಎಂದೂ ಒತ್ತಾಯಿಸಲಾಯಿತು. ವಿಪ್ರರು ಮೀಸಲಾತಿ ಕೇಳಲಾರರು. ಆದರೆ ಅವರ ಪ್ರತಿಭೆಗೆ ಅನುಗುಣವಾಗಿ ಅವರ ಬಯಕೆಯಂತೆ ಅವಕಾಶಗಳು ದೊರಬೇಕು ಎಂದು ಸಮಾವೇಶವು ಅಭಿಪ್ರಾಯಪಟ್ಟಿತು.
ಸುಳ್ಯ ತಾಲೂಕು ಮಟ್ಟದಲ್ಲಿ ವಿಪ್ರ ಯುವ ವೇದಿಕೆ ಮತ್ತು ವಿಪ್ರ ಮಹಿಳಾ ವೇದಿಕೆ ಆರಂಭಿಸಲು ಇದೇ ಸಂದರ್ಭದಲ್ಲಿ ನಿರ್ಧರಿಸಲಾಯಿತು.
ಎರಡೂ ವೇದಿಕೆಯ ಸಂಚಾಲಕರನ್ನಾಗಿ ಗುರುರಾಜ ಕಲ್ಕಾಡು ಮರ್ಕಂಜ, ಸಾಯಿನಾರಾಯಣ ಕಲ್ಮಡ್ಕ, ಅಖಿಲ್ ಸೋಮಯಾಜಿ, ಡಾ| ವೀಣಾ, ಮಮತಾ ಮೂಡಿತ್ತಾಯ, ಪ್ರಸನ್ನಾ ಭಾರಧ್ವಜ ಅವರನ್ನು ನೇಮಿಸಲಾಯಿತು. ವಿಪ್ರ ಸಮಾಜದ ವಿವಿಧ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…