ಸಂಖ್ಯಾ ದೃಷ್ಟಿಯಿಂದ ಕಡಿಮೆಯಿದ್ದರೂ ವಿಪ್ರರನ್ನು ಕಡೆಗಣಿಸಬಾರದು ಎಂದು ಸುಳ್ಯ ತಾಲೂಕು ವಿಪ್ರ ಸಮಾವೇಶದಲ್ಲಿ ಸರ್ಕಾರವನ್ನು ಆಗ್ರಹಿಸಲಾಗಿದೆ.
ಕಲ್ಮಡ್ಕದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು.ಸಮಾರೋಪ ಸಮಾರಂಭದಲ್ಲಿ ಅಖಿಲ ಕರ್ನಾಟಕ ವಿಪ್ರ ಮಹಾಸಭಾದ ಅಧ್ಯಕ್ಷ, ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಶೋಕ್ ಹಾರ್ನಹಳ್ಳಿ ಉಪಸ್ಥಿತರಿದ್ದರು.
ದೇಶದ ಅಭಿವೃದ್ಧಿಗೆ ವಿಪ್ರ ಸಮಾಜದ ಕೊಡುಗೆ ಅಪಾರ. ವಿಪ್ರ ಪ್ರತಿಭೆಗಳನ್ನು ಕಡೆಗಣಿಸುವುದರಿಂದ ದೇಶಕ್ಕೆ ನಷ್ಟವಾಗುತ್ತದೆ. ಆದ್ದರಿಂದ ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು ಎಂದೂ ಒತ್ತಾಯಿಸಲಾಯಿತು. ವಿಪ್ರರು ಮೀಸಲಾತಿ ಕೇಳಲಾರರು. ಆದರೆ ಅವರ ಪ್ರತಿಭೆಗೆ ಅನುಗುಣವಾಗಿ ಅವರ ಬಯಕೆಯಂತೆ ಅವಕಾಶಗಳು ದೊರಬೇಕು ಎಂದು ಸಮಾವೇಶವು ಅಭಿಪ್ರಾಯಪಟ್ಟಿತು.
ಸುಳ್ಯ ತಾಲೂಕು ಮಟ್ಟದಲ್ಲಿ ವಿಪ್ರ ಯುವ ವೇದಿಕೆ ಮತ್ತು ವಿಪ್ರ ಮಹಿಳಾ ವೇದಿಕೆ ಆರಂಭಿಸಲು ಇದೇ ಸಂದರ್ಭದಲ್ಲಿ ನಿರ್ಧರಿಸಲಾಯಿತು.
ಎರಡೂ ವೇದಿಕೆಯ ಸಂಚಾಲಕರನ್ನಾಗಿ ಗುರುರಾಜ ಕಲ್ಕಾಡು ಮರ್ಕಂಜ, ಸಾಯಿನಾರಾಯಣ ಕಲ್ಮಡ್ಕ, ಅಖಿಲ್ ಸೋಮಯಾಜಿ, ಡಾ| ವೀಣಾ, ಮಮತಾ ಮೂಡಿತ್ತಾಯ, ಪ್ರಸನ್ನಾ ಭಾರಧ್ವಜ ಅವರನ್ನು ನೇಮಿಸಲಾಯಿತು. ವಿಪ್ರ ಸಮಾಜದ ವಿವಿಧ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…