Advertisement
ಸುದ್ದಿಗಳು

ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು | ಸುಳ್ಯ ತಾಲೂಕು ವಿಪ್ರ ಸಮಾವೇಶದ ಆಶಯ |

Share

ಸಂಖ್ಯಾ ದೃಷ್ಟಿಯಿಂದ ಕಡಿಮೆಯಿದ್ದರೂ ವಿಪ್ರರನ್ನು ಕಡೆಗಣಿಸಬಾರದು ಎಂದು ಸುಳ್ಯ ತಾಲೂಕು ವಿಪ್ರ ಸಮಾವೇಶದಲ್ಲಿ ಸರ್ಕಾರವನ್ನು ಆಗ್ರಹಿಸಲಾಗಿದೆ.

ಕಲ್ಮಡ್ಕದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು.ಸಮಾರೋಪ ಸಮಾರಂಭದಲ್ಲಿ ಅಖಿಲ ಕರ್ನಾಟಕ ವಿಪ್ರ ಮಹಾಸಭಾದ ಅಧ್ಯಕ್ಷ, ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಶೋಕ್ ಹಾರ್ನಹಳ್ಳಿ ಉಪಸ್ಥಿತರಿದ್ದರು.

Photo Credit : ಶಿವಸುಬ್ರಹ್ಮಣ್ಯ ಕಲ್ಮಡ್ಕ

ದೇಶದ ಅಭಿವೃದ್ಧಿಗೆ ವಿಪ್ರ ಸಮಾಜದ ಕೊಡುಗೆ ಅಪಾರ. ವಿಪ್ರ ಪ್ರತಿಭೆಗಳನ್ನು ಕಡೆಗಣಿಸುವುದರಿಂದ ದೇಶಕ್ಕೆ ನಷ್ಟವಾಗುತ್ತದೆ. ಆದ್ದರಿಂದ ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು ಎಂದೂ ಒತ್ತಾಯಿಸಲಾಯಿತು. ವಿಪ್ರರು ಮೀಸಲಾತಿ ಕೇಳಲಾರರು. ಆದರೆ ಅವರ ಪ್ರತಿಭೆಗೆ ಅನುಗುಣವಾಗಿ ಅವರ ಬಯಕೆಯಂತೆ ಅವಕಾಶಗಳು ದೊರಬೇಕು ಎಂದು ಸಮಾವೇಶವು ಅಭಿಪ್ರಾಯಪಟ್ಟಿತು.
ಸುಳ್ಯ ತಾಲೂಕು ಮಟ್ಟದಲ್ಲಿ ವಿಪ್ರ ಯುವ ವೇದಿಕೆ ಮತ್ತು ವಿಪ್ರ ಮಹಿಳಾ ವೇದಿಕೆ ಆರಂಭಿಸಲು ಇದೇ ಸಂದರ್ಭದಲ್ಲಿ ನಿರ್ಧರಿಸಲಾಯಿತು.

ಎರಡೂ ವೇದಿಕೆಯ ಸಂಚಾಲಕರನ್ನಾಗಿ ಗುರುರಾಜ ಕಲ್ಕಾಡು ಮರ್ಕಂಜ, ಸಾಯಿನಾರಾಯಣ ಕಲ್ಮಡ್ಕ,  ಅಖಿಲ್ ಸೋಮಯಾಜಿ, ಡಾ| ವೀಣಾ, ಮಮತಾ ಮೂಡಿತ್ತಾಯ,  ಪ್ರಸನ್ನಾ ಭಾರಧ್ವಜ ಅವರನ್ನು ನೇಮಿಸಲಾಯಿತು. ವಿಪ್ರ ಸಮಾಜದ ವಿವಿಧ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago