ಸಂಖ್ಯಾ ದೃಷ್ಟಿಯಿಂದ ಕಡಿಮೆಯಿದ್ದರೂ ವಿಪ್ರರನ್ನು ಕಡೆಗಣಿಸಬಾರದು ಎಂದು ಸುಳ್ಯ ತಾಲೂಕು ವಿಪ್ರ ಸಮಾವೇಶದಲ್ಲಿ ಸರ್ಕಾರವನ್ನು ಆಗ್ರಹಿಸಲಾಗಿದೆ.
ಕಲ್ಮಡ್ಕದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು.ಸಮಾರೋಪ ಸಮಾರಂಭದಲ್ಲಿ ಅಖಿಲ ಕರ್ನಾಟಕ ವಿಪ್ರ ಮಹಾಸಭಾದ ಅಧ್ಯಕ್ಷ, ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಶೋಕ್ ಹಾರ್ನಹಳ್ಳಿ ಉಪಸ್ಥಿತರಿದ್ದರು.
ದೇಶದ ಅಭಿವೃದ್ಧಿಗೆ ವಿಪ್ರ ಸಮಾಜದ ಕೊಡುಗೆ ಅಪಾರ. ವಿಪ್ರ ಪ್ರತಿಭೆಗಳನ್ನು ಕಡೆಗಣಿಸುವುದರಿಂದ ದೇಶಕ್ಕೆ ನಷ್ಟವಾಗುತ್ತದೆ. ಆದ್ದರಿಂದ ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು ಎಂದೂ ಒತ್ತಾಯಿಸಲಾಯಿತು. ವಿಪ್ರರು ಮೀಸಲಾತಿ ಕೇಳಲಾರರು. ಆದರೆ ಅವರ ಪ್ರತಿಭೆಗೆ ಅನುಗುಣವಾಗಿ ಅವರ ಬಯಕೆಯಂತೆ ಅವಕಾಶಗಳು ದೊರಬೇಕು ಎಂದು ಸಮಾವೇಶವು ಅಭಿಪ್ರಾಯಪಟ್ಟಿತು.
ಸುಳ್ಯ ತಾಲೂಕು ಮಟ್ಟದಲ್ಲಿ ವಿಪ್ರ ಯುವ ವೇದಿಕೆ ಮತ್ತು ವಿಪ್ರ ಮಹಿಳಾ ವೇದಿಕೆ ಆರಂಭಿಸಲು ಇದೇ ಸಂದರ್ಭದಲ್ಲಿ ನಿರ್ಧರಿಸಲಾಯಿತು.
ಎರಡೂ ವೇದಿಕೆಯ ಸಂಚಾಲಕರನ್ನಾಗಿ ಗುರುರಾಜ ಕಲ್ಕಾಡು ಮರ್ಕಂಜ, ಸಾಯಿನಾರಾಯಣ ಕಲ್ಮಡ್ಕ, ಅಖಿಲ್ ಸೋಮಯಾಜಿ, ಡಾ| ವೀಣಾ, ಮಮತಾ ಮೂಡಿತ್ತಾಯ, ಪ್ರಸನ್ನಾ ಭಾರಧ್ವಜ ಅವರನ್ನು ನೇಮಿಸಲಾಯಿತು. ವಿಪ್ರ ಸಮಾಜದ ವಿವಿಧ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…