(ಕಡತ ಚಿತ್ರ )
ಸುಳ್ಯದ ಕಸದ ಸಮಸ್ಯೆ ಅನೇಕ ವರ್ಷಗಳಿಂದ ಇದೆ. ಇದುವರೆಗೂ ತ್ಯಾಜ್ಯ ವಿಲೇವಾರಿಯೇ ತಲೆನೋವಾಗಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ , ಸಂಸದರ ಮಾಜಿ ಆಪ್ತ ಕಾರ್ಯದರ್ಶಿ ಸುಪ್ರೀತ್ ಮೋಂಟಡ್ಕ ಅವರು ಚಿತ್ರನಟ ಅನಿರುದ್ಧ ಅವರಿಗೆ ವಿಡಿಯೋ ಕಳಿಸಿದ್ದರು. ಸುಳ್ಯದ ಕಸದ ವಿಡಿಯೋ ಹಾಗೂ ಫೋಟೊ ನೋಡಿದ ಚಿತ್ರನಟ ಅನಿರುದ್ಧ ಅವರು “ಸುಳ್ಯದ ಕಸದ ಸಮಸ್ಯೆಗೆ ಮುಕ್ತಿ ನೀಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಆದರೆ ಇದೀಗ ಆ ವಿಡಿಯೋ ಕಳಿಸಿದ ವ್ಯಕ್ತಿಯ ಬಗ್ಗೆ ಪಕ್ಷದ ಪ್ರಮುಖರು ಮುನಿಸಿಕೊಂಡಿದ್ದಾರೆ ಎಂಬುದು ಚರ್ಚೆಯಾಗುತ್ತಿದೆ. ಕಸದ ವಿಲೇವಾರಿ ಬಗ್ಗೆ, ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳು ಬಗ್ಗೆ , ಇದುವರೆಗೂ ತ್ಯಾಜ್ಯ ವಿಲೇವಾರಿಗೆ ಕ್ರಮವಾಗದ ಬಗ್ಗೆ ಯಾವುದೇ ಪ್ರತಿಕ್ರಿಯೆಗಳು ಕಾಣಲಿಲ್ಲ, ಬದಲಾಗಿ ಅನಿರುದ್ಧ ಅವರಿಗೆ ಮಾಹಿತಿ ನೀಡಿದ ಸುಪ್ರೀತ್ ಬಗ್ಗೆ ಅಸಮಾಧಾನಗಳನ್ನು ಪಕ್ಷದ ಪ್ರಮುಖರು ವ್ಯಕ್ತಪಡಿಸಿದರೆ ಸಾರ್ವಜನಿಕ ವಲಯದಲ್ಲಿ ಅನಿರುದ್ಧ ಅವರ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…