(ಕಡತ ಚಿತ್ರ )
ಸುಳ್ಯದ ಕಸದ ಸಮಸ್ಯೆ ಅನೇಕ ವರ್ಷಗಳಿಂದ ಇದೆ. ಇದುವರೆಗೂ ತ್ಯಾಜ್ಯ ವಿಲೇವಾರಿಯೇ ತಲೆನೋವಾಗಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ , ಸಂಸದರ ಮಾಜಿ ಆಪ್ತ ಕಾರ್ಯದರ್ಶಿ ಸುಪ್ರೀತ್ ಮೋಂಟಡ್ಕ ಅವರು ಚಿತ್ರನಟ ಅನಿರುದ್ಧ ಅವರಿಗೆ ವಿಡಿಯೋ ಕಳಿಸಿದ್ದರು. ಸುಳ್ಯದ ಕಸದ ವಿಡಿಯೋ ಹಾಗೂ ಫೋಟೊ ನೋಡಿದ ಚಿತ್ರನಟ ಅನಿರುದ್ಧ ಅವರು “ಸುಳ್ಯದ ಕಸದ ಸಮಸ್ಯೆಗೆ ಮುಕ್ತಿ ನೀಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಆದರೆ ಇದೀಗ ಆ ವಿಡಿಯೋ ಕಳಿಸಿದ ವ್ಯಕ್ತಿಯ ಬಗ್ಗೆ ಪಕ್ಷದ ಪ್ರಮುಖರು ಮುನಿಸಿಕೊಂಡಿದ್ದಾರೆ ಎಂಬುದು ಚರ್ಚೆಯಾಗುತ್ತಿದೆ. ಕಸದ ವಿಲೇವಾರಿ ಬಗ್ಗೆ, ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳು ಬಗ್ಗೆ , ಇದುವರೆಗೂ ತ್ಯಾಜ್ಯ ವಿಲೇವಾರಿಗೆ ಕ್ರಮವಾಗದ ಬಗ್ಗೆ ಯಾವುದೇ ಪ್ರತಿಕ್ರಿಯೆಗಳು ಕಾಣಲಿಲ್ಲ, ಬದಲಾಗಿ ಅನಿರುದ್ಧ ಅವರಿಗೆ ಮಾಹಿತಿ ನೀಡಿದ ಸುಪ್ರೀತ್ ಬಗ್ಗೆ ಅಸಮಾಧಾನಗಳನ್ನು ಪಕ್ಷದ ಪ್ರಮುಖರು ವ್ಯಕ್ತಪಡಿಸಿದರೆ ಸಾರ್ವಜನಿಕ ವಲಯದಲ್ಲಿ ಅನಿರುದ್ಧ ಅವರ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…