ಸುಳ್ಯ ನಗರ ಪಂಚಾಯತ್ | ಸುಳ್ಯ ನಗರದ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಬದ್ಧ | ಕೆಲವರು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ | ನಗರ ಪಂಚಾಯತ್‌ ಅಧ್ಯಕ್ಷರ ಹೇಳಿಕೆ |

May 11, 2022
8:01 PM
ಸುಳ್ಯ ನಗರ ಪಂಚಾಯತ್ ನ ಅವರಣದಲ್ಲಿರುವ ಕಸದ ವಿಲೇವಾರಿಗೆ ಸಂಬಂಧಿಸಿದಂತೆ  ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದ್ದು ಈ ಬಗ್ಗೆ ನಗರ ಪಂಚಾಯತ್‌ ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ 2016 ರಿಂದಲೂ ಕಸ ಸಂಗ್ರಹವಾಗುತ್ತಿದ್ದು ಪಂಚಾಯತ್ ಗೆ ಕಸ ವಿಲೇವಾರಿಗೆ ನಿಗದಿಗೊಳಿಸಿದ ಕಲ್ಚರ್ಪೆ ಯಲ್ಲಿ ಅರಣ್ಯ ಇಲಾಖೆಯ ತಕರಾರಿನ ಕಾರಣದಿಂದಾಗಿ ಹಾಗೂ ಹಿಂದೆ ಅವೈಜ್ಞಾನಿಕವಾಗಿ ಕಸವನ್ನು ರಾಶಿ ಹಾಕಿದ ಕಾರಣದಿಂದ ಸ್ಥಳೀಯರ ಪ್ರತಿಭಟನೆ ಯಿಂದಾಗಿ ಕಸ ವಿಲೇವಾರಿಗೆ ಸ್ಥಳವಿಲ್ಲದೆ ನ ಪಂ ಆವರಣದಲ್ಲಿ ಕಸವನ್ನು ಶೇಖರಿಸಲಾಗಿತ್ತು.

ಪ್ರಸ್ತುತ ಆಡಳಿತವು ಅಧಿಕಾರಕ್ಕೆ ಬಂದ ಬಳಿಕ ಕಸ ವಿಲೇವಾರಿಗೆ ಅನೇಕ ವೈಜ್ಞಾನಿಕ ಪ್ರಯೋಗಗಳನ್ನು ಮಾಡಿರುತ್ತದೆ.
ಅಲ್ಲದೆ ಪಂಚಾಯತ್ ಆವರಣದಲ್ಲಿನ ಕಸವನ್ನು ವಿಲೇ ಮಾಡುವರೇ ಸತತ ಪ್ರಯತ್ನ ಮಾಡಿದ್ದು ಕಸವನ್ನು ವೈಜ್ಞಾನಿಕ ವಿಲೇ ಮಾಡುವ ಏಜನ್ಸಿ ಗಳು ಮುಂದೆ ಬಂದಿದ್ದು ಜಿಲ್ಲಾಧಿಕಾರಿಗಳ ಅನುಮೋದನೆ ಬಳಿಕ ಮೇ 5 ರಂದು ಟೆಂಡರ್ ಕರೆಯಲಾಗಿದ್ದು ಮೇ 12 ಟೆಂಡರ್ ಗೆ ಕೊನೆಯ ದಿನಾಂಕವಾಗಿರುತ್ತದೆ. ಅತ್ಯಂತ ಕಡಿಮೆ ಬಿಡ್ ಕರೆದವರ ಟೆಂಡರ್ ಖಾಯಂ ಗೊಳಿಸಿ ಕಸವನ್ನು ವೈಜ್ಞಾನಿಕವಾಗಿ ವಿಲೇ ಮಾಡುವವರಿಗೆ ಕೊಂಡೊಯ್ಯಲು ನೀಡಲಾಗುವುದು. ಮೇ ತಿಂಗಳ ಅಂತ್ಯದೊಳಗಾಗಿ ಈ ಎಲ್ಲಾ ಪ್ರಕ್ರಿಯೆಗಳು ಮುಗಿಯುವ ನಿರೀಕ್ಷೆ ಇದ್ದು ಈ ಮಧ್ಯೆ ಕಸ ಖಾಲಿಯಾಗುವ ಸುಳಿವು ದೊರೆತ ಕೆಲವರು ಈ ಕ್ರೆಡಿಟ್ ನ್ನು ತಮ್ಮದಾಗಿಸಿಕೊಳ್ಳಲು ಸಾಮಾಜಿಕ ಜಾಲತಾಣಗಳಲ್ಲಿ, ವಾಟ್ಸಾಪ್ ಗುಂಪುಗಳಲ್ಲಿ ಸಮಾಜ ಸುಧಾರಕರಂತೆ ತಮ್ಮನ್ನು ಬಿಂಬಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಇನ್ನು ಕೆಲವರು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಇನ್ನೂ ಕೆಲವರು ಕಸ ಸಾಗಾಟವಾಗದಂತೆ ತಡೆಯಲು ಹಿಂಬಾಗಿಲ ಪ್ರಯತ್ನವನ್ನು ಮಾಡುತ್ತಿದ್ದಾರೆ. ಎಂದು ವಿನಯ ಕುಮಾರ್‌ ಕಂದಡ್ಕ ಹೇಳಿದ್ದಾರೆ.

ಕಸ ವಿಲೇವಾರಿ ಎಂಬುದು ಅತ್ಯಂತ ಸೂಕ್ಶ್ಮ ವಿಷಯವಾಗಿದ್ದು ಎಲ್ಲಾ ನಿಯಮಗಳನ್ನು ಪಾಲಿಸಿಯೇ ಈ ಪ್ರಕ್ರಿಯೆಗಳು ನಡೆದಿರುವುದರಿಂದ ತಡವಾಗಿದೆಯೇ ವಿನಃ ಬೇರ್ಯಾವುದೇ ಕಾರಣದಿಂದಲ್ಲ. ಈಗಾಗಲೇ ತಿಳಿಸಿದಂತೆ ನಗರದ ಮೂಲಭೂತ ಸಮಸ್ಯೆಗಳ ನಿವಾರಣೆ ನಮ್ಮ ಬದ್ಧತೆಯಾಗಿದ್ದು ಇದನ್ನು ಪೂರೈಸಲು ಆಡಳಿತವು ಬದ್ದವಾಗಿರುತ್ತದೆ ಎಂದು ವಿನಯ ಕುಮಾರ್ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror