Advertisement
ಸುದ್ದಿಗಳು

ಸುಳ್ಯ ನಗರ ಪಂಚಾಯತ್ | ಸುಳ್ಯ ನಗರದ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಬದ್ಧ | ಕೆಲವರು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ | ನಗರ ಪಂಚಾಯತ್‌ ಅಧ್ಯಕ್ಷರ ಹೇಳಿಕೆ |

Share
ಸುಳ್ಯ ನಗರ ಪಂಚಾಯತ್ ನ ಅವರಣದಲ್ಲಿರುವ ಕಸದ ವಿಲೇವಾರಿಗೆ ಸಂಬಂಧಿಸಿದಂತೆ  ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದ್ದು ಈ ಬಗ್ಗೆ ನಗರ ಪಂಚಾಯತ್‌ ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ 2016 ರಿಂದಲೂ ಕಸ ಸಂಗ್ರಹವಾಗುತ್ತಿದ್ದು ಪಂಚಾಯತ್ ಗೆ ಕಸ ವಿಲೇವಾರಿಗೆ ನಿಗದಿಗೊಳಿಸಿದ ಕಲ್ಚರ್ಪೆ ಯಲ್ಲಿ ಅರಣ್ಯ ಇಲಾಖೆಯ ತಕರಾರಿನ ಕಾರಣದಿಂದಾಗಿ ಹಾಗೂ ಹಿಂದೆ ಅವೈಜ್ಞಾನಿಕವಾಗಿ ಕಸವನ್ನು ರಾಶಿ ಹಾಕಿದ ಕಾರಣದಿಂದ ಸ್ಥಳೀಯರ ಪ್ರತಿಭಟನೆ ಯಿಂದಾಗಿ ಕಸ ವಿಲೇವಾರಿಗೆ ಸ್ಥಳವಿಲ್ಲದೆ ನ ಪಂ ಆವರಣದಲ್ಲಿ ಕಸವನ್ನು ಶೇಖರಿಸಲಾಗಿತ್ತು.

ಪ್ರಸ್ತುತ ಆಡಳಿತವು ಅಧಿಕಾರಕ್ಕೆ ಬಂದ ಬಳಿಕ ಕಸ ವಿಲೇವಾರಿಗೆ ಅನೇಕ ವೈಜ್ಞಾನಿಕ ಪ್ರಯೋಗಗಳನ್ನು ಮಾಡಿರುತ್ತದೆ.
ಅಲ್ಲದೆ ಪಂಚಾಯತ್ ಆವರಣದಲ್ಲಿನ ಕಸವನ್ನು ವಿಲೇ ಮಾಡುವರೇ ಸತತ ಪ್ರಯತ್ನ ಮಾಡಿದ್ದು ಕಸವನ್ನು ವೈಜ್ಞಾನಿಕ ವಿಲೇ ಮಾಡುವ ಏಜನ್ಸಿ ಗಳು ಮುಂದೆ ಬಂದಿದ್ದು ಜಿಲ್ಲಾಧಿಕಾರಿಗಳ ಅನುಮೋದನೆ ಬಳಿಕ ಮೇ 5 ರಂದು ಟೆಂಡರ್ ಕರೆಯಲಾಗಿದ್ದು ಮೇ 12 ಟೆಂಡರ್ ಗೆ ಕೊನೆಯ ದಿನಾಂಕವಾಗಿರುತ್ತದೆ. ಅತ್ಯಂತ ಕಡಿಮೆ ಬಿಡ್ ಕರೆದವರ ಟೆಂಡರ್ ಖಾಯಂ ಗೊಳಿಸಿ ಕಸವನ್ನು ವೈಜ್ಞಾನಿಕವಾಗಿ ವಿಲೇ ಮಾಡುವವರಿಗೆ ಕೊಂಡೊಯ್ಯಲು ನೀಡಲಾಗುವುದು. ಮೇ ತಿಂಗಳ ಅಂತ್ಯದೊಳಗಾಗಿ ಈ ಎಲ್ಲಾ ಪ್ರಕ್ರಿಯೆಗಳು ಮುಗಿಯುವ ನಿರೀಕ್ಷೆ ಇದ್ದು ಈ ಮಧ್ಯೆ ಕಸ ಖಾಲಿಯಾಗುವ ಸುಳಿವು ದೊರೆತ ಕೆಲವರು ಈ ಕ್ರೆಡಿಟ್ ನ್ನು ತಮ್ಮದಾಗಿಸಿಕೊಳ್ಳಲು ಸಾಮಾಜಿಕ ಜಾಲತಾಣಗಳಲ್ಲಿ, ವಾಟ್ಸಾಪ್ ಗುಂಪುಗಳಲ್ಲಿ ಸಮಾಜ ಸುಧಾರಕರಂತೆ ತಮ್ಮನ್ನು ಬಿಂಬಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಇನ್ನು ಕೆಲವರು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಇನ್ನೂ ಕೆಲವರು ಕಸ ಸಾಗಾಟವಾಗದಂತೆ ತಡೆಯಲು ಹಿಂಬಾಗಿಲ ಪ್ರಯತ್ನವನ್ನು ಮಾಡುತ್ತಿದ್ದಾರೆ. ಎಂದು ವಿನಯ ಕುಮಾರ್‌ ಕಂದಡ್ಕ ಹೇಳಿದ್ದಾರೆ.

ಕಸ ವಿಲೇವಾರಿ ಎಂಬುದು ಅತ್ಯಂತ ಸೂಕ್ಶ್ಮ ವಿಷಯವಾಗಿದ್ದು ಎಲ್ಲಾ ನಿಯಮಗಳನ್ನು ಪಾಲಿಸಿಯೇ ಈ ಪ್ರಕ್ರಿಯೆಗಳು ನಡೆದಿರುವುದರಿಂದ ತಡವಾಗಿದೆಯೇ ವಿನಃ ಬೇರ್ಯಾವುದೇ ಕಾರಣದಿಂದಲ್ಲ. ಈಗಾಗಲೇ ತಿಳಿಸಿದಂತೆ ನಗರದ ಮೂಲಭೂತ ಸಮಸ್ಯೆಗಳ ನಿವಾರಣೆ ನಮ್ಮ ಬದ್ಧತೆಯಾಗಿದ್ದು ಇದನ್ನು ಪೂರೈಸಲು ಆಡಳಿತವು ಬದ್ದವಾಗಿರುತ್ತದೆ ಎಂದು ವಿನಯ ಕುಮಾರ್ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

20 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

20 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago