Advertisement
ಸುದ್ದಿಗಳು

ಮೀಸಲು ಕ್ಷೇತ್ರದ ಶೋಚನೀಯ ಪರಿಸ್ಥಿತಿ ಬಗ್ಗೆ ವೈಜ್ಞಾನಿಕ ಅಧ್ಯಯನ ವರದಿ ಮಾಡಿ ಶ್ವೇತ ಪತ್ರಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ  ಕಳೆದ ಸುಮಾರು 50 ವರ್ಷಗಳಿಂದ ಎಸ್ ಸಿ ಮೀಸಲು ಕ್ಷೇತ್ರವಾಗಿದೆ. ಹೀಗಾಗಿ  ಸುಳ್ಯದ ಶೋಷಿತ ವರ್ಗಗಳ ಶೋಚನೀಯ ಪರಿಸ್ಥಿತಿ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ವರದಿ ಮಾಡಿ ಶ್ವೇತ ಪತ್ರ ಹೊರಡಿಸಬೇಕೆಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸುತ್ತದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಮಂಡಳಿ ಸದಸ್ಯ, ದಕ- ಉಡುಪಿ ಜಿಲ್ಲಾ ವೀಕ್ಷಕ ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ  ಇಂದಿಗೂ ಹಲವು ಮೂಲಭೂತ ಸಮಸ್ಯೆಗಳು ಕಂಡುಬರುತ್ತಿವೆ,ಅದರಲ್ಲೂ ಎಸ್‌ ಸಿ – ಎಸ್ಟಿ ಸಮುದಾಯಗಳಿಗೂ ಸಾಕಷ್ಟು ಅಭಿವೃದ್ಧಿ ಪರವಾದ ಯೋಜನೆಗಳು ತಲುಪಿದಂತೆ ಕಾಣುತ್ತಿಲ್ಲ., ರಸ್ತೆ, ಸೇತುವೆ, ಮನೆ , ವಿದ್ಯುತ್‌ ಸೇರಿದಂತೆ ಹಲವು ಮೂಲಭೂತ ಕೊರತೆಗಳು ಎದ್ದು ಕಾಣುತ್ತಿವೆ. ಕೆಲವೊಮ್ಮೆ ಎಸ್ಸಿ- ಎಸ್ಟಿ ಯೋಜನೆಯ ಅನುದಾನಗಳೂ ಬಳಕೆಯಾಗದೇ ಇರುವುದೂ ಕಂಡುಬಂದಿದೆ. ಅದೂ ಅಲ್ಲದೆ ಮಾದರಿಯಾಗಿರುವ ಕಾಲನಿಗಳೂ ಎದ್ದು ಕಾಣುತ್ತಿಲ್ಲ. ಹಾಗಿದ್ದರೂ ಸುಳ್ಯದ ಜನಪ್ರತಿನಿಧಿಗಳು ಮಾತನಾಡುವುದು  ಕಂಡುಬರುತ್ತಿಲ್ಲ. ಇದಕ್ಕೆ ಉದಾಹರಣೆಯಾಗಿ ಈಚೆಗೆ ವಿಧಾನ ಪರಿಷತ್ ಸದಸ್ಯರಾದ ಮುನಿರಾಜು ಗೌಡ ಅವರು ಸುಳ್ಯ ಮಂಡೆಕೋಲು ಗ್ರಾಮದ ಎಸ್‌ ಸಿ – ಎಸ್ಟಿ ಸಮುದಾಯಗಳ ಮನೆಗಳಿಗೆ ತೆರಳುವ ರಸ್ತೆ ಅವ್ಯವಸ್ಥೆ ಬಗ್ಗೆ ಧ್ವನಿ ಎತ್ತಿದ್ದಾರೆ.

ರಾಜ್ಯವನ್ನು ಈಗ ಆಳುವ ಬಿಜೆಪಿ ಪಕ್ಷದ ಅಧ್ಯಕ್ಷರಾಗಿದ್ದ, ಮುಖ್ಯಮಂತ್ರಿ, ಕೇಂದ್ರ ಮಂತ್ರಿಯಾಗಿದ್ದ ಡಿ ವಿ ಸದಾನಂದ ಗೌಡ ಅವರ ತವರು ಗ್ರಾಮ ಹಾಗೂ 27 ವರ್ಷ ಮೀಸಲು ಸುಳ್ಯ ಕ್ಷೇತ್ರದ ಶಾಸಕ, ಇದೀಗ ಸಚಿವರ ಕ್ಷೇತ್ರದ ಬಗ್ಗೆ ಸದನದಲ್ಲಿ ಬೇಡಿಕೆ ಇಟ್ಟ ಶೋಚನೀಯ ಸ್ಥಿತಿ ಬಂದಿದೆ. ಹೀಗಾಗಿ ಇಷ್ಟೂ ವರ್ಷಗಳಲ್ಲಿ  ಸುಳ್ಯ ಕ್ಷೇತ್ರ ಸುಳ್ಯದ ಶೋಷಿತ ವರ್ಗಗಳ ಶೋಚನೀಯ ಪರಿಸ್ಥಿತಿ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ವರದಿ ಮಾಡಿ ಶ್ವೇತ ಪತ್ರ ಹೊರಡಿಸಬೇಕು ಎಂದು  ಆಮ್ ಆದ್ಮಿ ಪಾರ್ಟಿ ಒತ್ತಾಯಿಸುತ್ತದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಮಂಡಳಿ ಸದಸ್ಯ, ದಕ- ಉಡುಪಿ ಜಿಲ್ಲಾ ವೀಕ್ಷಕ ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ವಿಧಾನಪರಿಷತ್‌ ನಲ್ಲಿ ಮುನಿರಾಜು ಅವರು ಸುಳ್ಯದ ರಸ್ತೆ ವಿಚಾರದ ಬಗ್ಗೆ ಪ್ರಶ್ನೆ……

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 hour ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 hour ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

2 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

10 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

10 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

12 hours ago