Advertisement
ಸುದ್ದಿಗಳು

ಮೀಸಲು ಕ್ಷೇತ್ರದ ಶೋಚನೀಯ ಪರಿಸ್ಥಿತಿ ಬಗ್ಗೆ ವೈಜ್ಞಾನಿಕ ಅಧ್ಯಯನ ವರದಿ ಮಾಡಿ ಶ್ವೇತ ಪತ್ರಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ  ಕಳೆದ ಸುಮಾರು 50 ವರ್ಷಗಳಿಂದ ಎಸ್ ಸಿ ಮೀಸಲು ಕ್ಷೇತ್ರವಾಗಿದೆ. ಹೀಗಾಗಿ  ಸುಳ್ಯದ ಶೋಷಿತ ವರ್ಗಗಳ ಶೋಚನೀಯ ಪರಿಸ್ಥಿತಿ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ವರದಿ ಮಾಡಿ ಶ್ವೇತ ಪತ್ರ ಹೊರಡಿಸಬೇಕೆಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸುತ್ತದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಮಂಡಳಿ ಸದಸ್ಯ, ದಕ- ಉಡುಪಿ ಜಿಲ್ಲಾ ವೀಕ್ಷಕ ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ  ಇಂದಿಗೂ ಹಲವು ಮೂಲಭೂತ ಸಮಸ್ಯೆಗಳು ಕಂಡುಬರುತ್ತಿವೆ,ಅದರಲ್ಲೂ ಎಸ್‌ ಸಿ – ಎಸ್ಟಿ ಸಮುದಾಯಗಳಿಗೂ ಸಾಕಷ್ಟು ಅಭಿವೃದ್ಧಿ ಪರವಾದ ಯೋಜನೆಗಳು ತಲುಪಿದಂತೆ ಕಾಣುತ್ತಿಲ್ಲ., ರಸ್ತೆ, ಸೇತುವೆ, ಮನೆ , ವಿದ್ಯುತ್‌ ಸೇರಿದಂತೆ ಹಲವು ಮೂಲಭೂತ ಕೊರತೆಗಳು ಎದ್ದು ಕಾಣುತ್ತಿವೆ. ಕೆಲವೊಮ್ಮೆ ಎಸ್ಸಿ- ಎಸ್ಟಿ ಯೋಜನೆಯ ಅನುದಾನಗಳೂ ಬಳಕೆಯಾಗದೇ ಇರುವುದೂ ಕಂಡುಬಂದಿದೆ. ಅದೂ ಅಲ್ಲದೆ ಮಾದರಿಯಾಗಿರುವ ಕಾಲನಿಗಳೂ ಎದ್ದು ಕಾಣುತ್ತಿಲ್ಲ. ಹಾಗಿದ್ದರೂ ಸುಳ್ಯದ ಜನಪ್ರತಿನಿಧಿಗಳು ಮಾತನಾಡುವುದು  ಕಂಡುಬರುತ್ತಿಲ್ಲ. ಇದಕ್ಕೆ ಉದಾಹರಣೆಯಾಗಿ ಈಚೆಗೆ ವಿಧಾನ ಪರಿಷತ್ ಸದಸ್ಯರಾದ ಮುನಿರಾಜು ಗೌಡ ಅವರು ಸುಳ್ಯ ಮಂಡೆಕೋಲು ಗ್ರಾಮದ ಎಸ್‌ ಸಿ – ಎಸ್ಟಿ ಸಮುದಾಯಗಳ ಮನೆಗಳಿಗೆ ತೆರಳುವ ರಸ್ತೆ ಅವ್ಯವಸ್ಥೆ ಬಗ್ಗೆ ಧ್ವನಿ ಎತ್ತಿದ್ದಾರೆ.

ರಾಜ್ಯವನ್ನು ಈಗ ಆಳುವ ಬಿಜೆಪಿ ಪಕ್ಷದ ಅಧ್ಯಕ್ಷರಾಗಿದ್ದ, ಮುಖ್ಯಮಂತ್ರಿ, ಕೇಂದ್ರ ಮಂತ್ರಿಯಾಗಿದ್ದ ಡಿ ವಿ ಸದಾನಂದ ಗೌಡ ಅವರ ತವರು ಗ್ರಾಮ ಹಾಗೂ 27 ವರ್ಷ ಮೀಸಲು ಸುಳ್ಯ ಕ್ಷೇತ್ರದ ಶಾಸಕ, ಇದೀಗ ಸಚಿವರ ಕ್ಷೇತ್ರದ ಬಗ್ಗೆ ಸದನದಲ್ಲಿ ಬೇಡಿಕೆ ಇಟ್ಟ ಶೋಚನೀಯ ಸ್ಥಿತಿ ಬಂದಿದೆ. ಹೀಗಾಗಿ ಇಷ್ಟೂ ವರ್ಷಗಳಲ್ಲಿ  ಸುಳ್ಯ ಕ್ಷೇತ್ರ ಸುಳ್ಯದ ಶೋಷಿತ ವರ್ಗಗಳ ಶೋಚನೀಯ ಪರಿಸ್ಥಿತಿ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ವರದಿ ಮಾಡಿ ಶ್ವೇತ ಪತ್ರ ಹೊರಡಿಸಬೇಕು ಎಂದು  ಆಮ್ ಆದ್ಮಿ ಪಾರ್ಟಿ ಒತ್ತಾಯಿಸುತ್ತದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಮಂಡಳಿ ಸದಸ್ಯ, ದಕ- ಉಡುಪಿ ಜಿಲ್ಲಾ ವೀಕ್ಷಕ ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ವಿಧಾನಪರಿಷತ್‌ ನಲ್ಲಿ ಮುನಿರಾಜು ಅವರು ಸುಳ್ಯದ ರಸ್ತೆ ವಿಚಾರದ ಬಗ್ಗೆ ಪ್ರಶ್ನೆ……

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

2 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

4 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

10 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago