ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ ಸುಮಾರು 50 ವರ್ಷಗಳಿಂದ ಎಸ್ ಸಿ ಮೀಸಲು ಕ್ಷೇತ್ರವಾಗಿದೆ. ಹೀಗಾಗಿ ಸುಳ್ಯದ ಶೋಷಿತ ವರ್ಗಗಳ ಶೋಚನೀಯ ಪರಿಸ್ಥಿತಿ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ವರದಿ ಮಾಡಿ ಶ್ವೇತ ಪತ್ರ ಹೊರಡಿಸಬೇಕೆಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸುತ್ತದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಮಂಡಳಿ ಸದಸ್ಯ, ದಕ- ಉಡುಪಿ ಜಿಲ್ಲಾ ವೀಕ್ಷಕ ಅಶೋಕ್ ಎಡಮಲೆ ತಿಳಿಸಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಇಂದಿಗೂ ಹಲವು ಮೂಲಭೂತ ಸಮಸ್ಯೆಗಳು ಕಂಡುಬರುತ್ತಿವೆ,ಅದರಲ್ಲೂ ಎಸ್ ಸಿ – ಎಸ್ಟಿ ಸಮುದಾಯಗಳಿಗೂ ಸಾಕಷ್ಟು ಅಭಿವೃದ್ಧಿ ಪರವಾದ ಯೋಜನೆಗಳು ತಲುಪಿದಂತೆ ಕಾಣುತ್ತಿಲ್ಲ., ರಸ್ತೆ, ಸೇತುವೆ, ಮನೆ , ವಿದ್ಯುತ್ ಸೇರಿದಂತೆ ಹಲವು ಮೂಲಭೂತ ಕೊರತೆಗಳು ಎದ್ದು ಕಾಣುತ್ತಿವೆ. ಕೆಲವೊಮ್ಮೆ ಎಸ್ಸಿ- ಎಸ್ಟಿ ಯೋಜನೆಯ ಅನುದಾನಗಳೂ ಬಳಕೆಯಾಗದೇ ಇರುವುದೂ ಕಂಡುಬಂದಿದೆ. ಅದೂ ಅಲ್ಲದೆ ಮಾದರಿಯಾಗಿರುವ ಕಾಲನಿಗಳೂ ಎದ್ದು ಕಾಣುತ್ತಿಲ್ಲ. ಹಾಗಿದ್ದರೂ ಸುಳ್ಯದ ಜನಪ್ರತಿನಿಧಿಗಳು ಮಾತನಾಡುವುದು ಕಂಡುಬರುತ್ತಿಲ್ಲ. ಇದಕ್ಕೆ ಉದಾಹರಣೆಯಾಗಿ ಈಚೆಗೆ ವಿಧಾನ ಪರಿಷತ್ ಸದಸ್ಯರಾದ ಮುನಿರಾಜು ಗೌಡ ಅವರು ಸುಳ್ಯ ಮಂಡೆಕೋಲು ಗ್ರಾಮದ ಎಸ್ ಸಿ – ಎಸ್ಟಿ ಸಮುದಾಯಗಳ ಮನೆಗಳಿಗೆ ತೆರಳುವ ರಸ್ತೆ ಅವ್ಯವಸ್ಥೆ ಬಗ್ಗೆ ಧ್ವನಿ ಎತ್ತಿದ್ದಾರೆ.
ರಾಜ್ಯವನ್ನು ಈಗ ಆಳುವ ಬಿಜೆಪಿ ಪಕ್ಷದ ಅಧ್ಯಕ್ಷರಾಗಿದ್ದ, ಮುಖ್ಯಮಂತ್ರಿ, ಕೇಂದ್ರ ಮಂತ್ರಿಯಾಗಿದ್ದ ಡಿ ವಿ ಸದಾನಂದ ಗೌಡ ಅವರ ತವರು ಗ್ರಾಮ ಹಾಗೂ 27 ವರ್ಷ ಮೀಸಲು ಸುಳ್ಯ ಕ್ಷೇತ್ರದ ಶಾಸಕ, ಇದೀಗ ಸಚಿವರ ಕ್ಷೇತ್ರದ ಬಗ್ಗೆ ಸದನದಲ್ಲಿ ಬೇಡಿಕೆ ಇಟ್ಟ ಶೋಚನೀಯ ಸ್ಥಿತಿ ಬಂದಿದೆ. ಹೀಗಾಗಿ ಇಷ್ಟೂ ವರ್ಷಗಳಲ್ಲಿ ಸುಳ್ಯ ಕ್ಷೇತ್ರ ಸುಳ್ಯದ ಶೋಷಿತ ವರ್ಗಗಳ ಶೋಚನೀಯ ಪರಿಸ್ಥಿತಿ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ವರದಿ ಮಾಡಿ ಶ್ವೇತ ಪತ್ರ ಹೊರಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸುತ್ತದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಮಂಡಳಿ ಸದಸ್ಯ, ದಕ- ಉಡುಪಿ ಜಿಲ್ಲಾ ವೀಕ್ಷಕ ಅಶೋಕ್ ಎಡಮಲೆ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮುನಿರಾಜು ಅವರು ಸುಳ್ಯದ ರಸ್ತೆ ವಿಚಾರದ ಬಗ್ಗೆ ಪ್ರಶ್ನೆ……
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…