ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತೀ ಹೆಚ್ಚಿನ ಮಳೆ ಬೀಳುವ ಪ್ರದೇಶ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಈ ಭಾಗದಲ್ಲಿ ಮಳೆ ಹೆಚ್ಚು. ಅದರಲ್ಲೂ ಕಲ್ಲಾಜೆ, ಸಂಪಾಜೆ, ಕೊಲ್ಲಮೊಗ್ರ ಪ್ರದೇಶದಲ್ಲಿ ಹೆಚ್ಚಿನ ಮಳೆ ಬೀಳುತ್ತದೆ. ಸುಳ್ಯ ಸೇರಿದಂತೆ ದ ಕ ಜಿಲ್ಲೆಯ ವಿವಿಧ ತಾಲೂಕುಗಳ ಸುಮಾರು 40 ಮಂದಿ ಕೃಷಿಕರು ಪ್ರತೀ ದಿನದ ಮಳೆ ಲೆಕ್ಕ ಹಾಗೂ ವಾತಾವರಣದ ಉಷ್ಣತೆಯನ್ನೂ ದಾಖಲಿಸುತ್ತಾರೆ. ಇದರ ಪ್ರಕಾರ ಸುಳ್ಯ ತಾಲೂಕು ಹೆಚ್ಚಿನ ಮಳೆ ಬೀಳುವ ಪ್ರದೇಶವೂ ಆಗಿದೆ. ಸರಕಾರಿ ಲೆಕ್ಕದಲ್ಲಿ ಯಾಕೆ ಸುಳ್ಯ ಅತಿವೃಷ್ಟಿ ಪಟ್ಟಿಯಿಂದ ಕೈತಪ್ಪಿದೆ?.
ಗ್ರಾಮೀಣ ಜನರಿಗೆ ಏನು ಸಮಸ್ಯೆ?ಅತಿವೃಷ್ಟಿ ಪೀಡಿತ ತಾಲೂಕು ಪಟ್ಟಿಯಿಂದ ಬಿಟ್ಟು ಹೋದರೆ ಏನು ಸಮಸ್ಯೆ ಎಂಬುದು ಸಾಮಾನ್ಯ ಪ್ರಶ್ನೆಯಾಗಿದೆ. ಪ್ರತೀ ಬಾರಿ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸರಕಾರವು ಮಳೆಹಾನಿ ಎಂದು ಒಂದಷ್ಟು ಅನುದಾನ ಬಿಡುಗಡೆ ಮಾಡುತ್ತದೆ. ಭಾರೀ ಮಳೆಯ ಕಾರಣದಿಂದ ಜನರ ಮೂಲಭೂತ ಅವಶ್ಯಕತೆಯಾದ ರಸ್ತೆ ಸೇರಿದಂತೆ ತಡೆಗೋಡೆಗಳ ಕುಸಿತವಾಗಿರುತ್ತದೆ. ಇದರ ದುರಸ್ತಿಗೆ ಅನುದಾನಗಳು ಲಭ್ಯವಾಗುತ್ತದೆ. ಈ ಅನುದಾನದಲ್ಲಿ ಕೆಲವು ರಸ್ತೆಗಳ ದುರಸ್ತಿಯೂ ಸಾಧ್ಯವಿದೆ. ಆದರೆ ಅತಿವೃಷ್ಟಿ ತಾಲೂಕು ಪಟ್ಟಿಯಿಂದ ಹೊರಬಂದರೆ ಈ ಅನುದಾನದಲ್ಲಿ ಕೊರತೆಯಾಗಬಹುದು ಎಂಬ ಕಾರಣಕ್ಕೆ ಸುಳ್ಯದ ಜನರು ವಾಸ್ತವದ ನೆಲೆಯಲ್ಲಿ ಒತ್ತಾಯ ಮಾಡಿದ್ದರು.
ಮಲೆನಾಡು ಹಿತರಕ್ಷಣಾ ವೇದಿಕೆ ಒತ್ತಾಯ:
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…