Advertisement
MIRROR FOCUS

ಸುಳ್ಯ ಅತಿವೃಷ್ಟಿ ತಾಲೂಕು ಯಾಕಾಗಲಿಲ್ಲ ? ಇದರಿಂದಾಗಿ ಗ್ರಾಮೀಣ ಜನರಿಗೆ ಸಂಕಷ್ಟವೇನು?

Share
ಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳು ಅತಿವೃಷ್ಟಿ ತಾಲೂಕಿನ ಪಟ್ಟಿಯಲ್ಲಿದ್ದರೆ ಸುಳ್ಯ ಮಾತ್ರಾ ಆ ಪಟ್ಟಿಗೆ ಸೇರಲಿಲ್ಲ. ಈ ವರ್ಷ ಮಾತ್ರವಲ್ಲ ಕಳೆದ ವರ್ಷವೂ ಈ ಪಟ್ಟಿಯಿಂದ ಆರಂಭದಲ್ಲಿ  ಹೊರಬಿದ್ದಿತ್ತು. ಒತ್ತಾಯದ ಬಳಿಕ ಸೇರ್ಪಡೆಯಾಗಿತ್ತು. ಈ ಬಾರಿಯೂ ಅದೇ ಪುನರಾವರ್ತನೆಯಾಗಿದೆ.
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತೀ ಹೆಚ್ಚಿನ ಮಳೆ ಬೀಳುವ ಪ್ರದೇಶ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಈ ಭಾಗದಲ್ಲಿ  ಮಳೆ ಹೆಚ್ಚು. ಅದರಲ್ಲೂ ಕಲ್ಲಾಜೆ, ಸಂಪಾಜೆ, ಕೊಲ್ಲಮೊಗ್ರ  ಪ್ರದೇಶದಲ್ಲಿ ಹೆಚ್ಚಿನ ಮಳೆ ಬೀಳುತ್ತದೆ. ಸುಳ್ಯ ಸೇರಿದಂತೆ ದ ಕ ಜಿಲ್ಲೆಯ ವಿವಿಧ ತಾಲೂಕುಗಳ ಸುಮಾರು 40  ಮಂದಿ ಕೃಷಿಕರು ಪ್ರತೀ ದಿನದ ಮಳೆ ಲೆಕ್ಕ ಹಾಗೂ ವಾತಾವರಣದ ಉಷ್ಣತೆಯನ್ನೂ ದಾಖಲಿಸುತ್ತಾರೆ. ಇದರ ಪ್ರಕಾರ ಸುಳ್ಯ ತಾಲೂಕು ಹೆಚ್ಚಿನ ಮಳೆ ಬೀಳುವ ಪ್ರದೇಶವೂ ಆಗಿದೆ. ಸರಕಾರಿ ಲೆಕ್ಕದಲ್ಲಿ ಯಾಕೆ ಸುಳ್ಯ ಅತಿವೃಷ್ಟಿ ಪಟ್ಟಿಯಿಂದ ಕೈತಪ್ಪಿದೆ?.

Advertisement
ಗ್ರಾಮೀಣ ಜನರಿಗೆ ಏನು ಸಮಸ್ಯೆ?

ಅತಿವೃಷ್ಟಿ ಪೀಡಿತ ತಾಲೂಕು ಪಟ್ಟಿಯಿಂದ ಬಿಟ್ಟು ಹೋದರೆ ಏನು ಸಮಸ್ಯೆ ಎಂಬುದು ಸಾಮಾನ್ಯ ಪ್ರಶ್ನೆಯಾಗಿದೆ. ಪ್ರತೀ ಬಾರಿ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸರಕಾರವು ಮಳೆಹಾನಿ ಎಂದು ಒಂದಷ್ಟು ಅನುದಾನ ಬಿಡುಗಡೆ ಮಾಡುತ್ತದೆ. ಭಾರೀ ಮಳೆಯ ಕಾರಣದಿಂದ ಜನರ ಮೂಲಭೂತ ಅವಶ್ಯಕತೆಯಾದ ರಸ್ತೆ ಸೇರಿದಂತೆ ತಡೆಗೋಡೆಗಳ ಕುಸಿತವಾಗಿರುತ್ತದೆ. ಇದರ ದುರಸ್ತಿಗೆ ಅನುದಾನಗಳು ಲಭ್ಯವಾಗುತ್ತದೆ. ಈ ಅನುದಾನದಲ್ಲಿ ಕೆಲವು ರಸ್ತೆಗಳ ದುರಸ್ತಿಯೂ ಸಾಧ್ಯವಿದೆ. ಆದರೆ ಅತಿವೃಷ್ಟಿ ತಾಲೂಕು ಪಟ್ಟಿಯಿಂದ ಹೊರಬಂದರೆ ಈ ಅನುದಾನದಲ್ಲಿ ಕೊರತೆಯಾಗಬಹುದು ಎಂಬ ಕಾರಣಕ್ಕೆ ಸುಳ್ಯದ ಜನರು ವಾಸ್ತವದ ನೆಲೆಯಲ್ಲಿ  ಒತ್ತಾಯ ಮಾಡಿದ್ದರು.

ಮಲೆನಾಡು ಹಿತರಕ್ಷಣಾ ವೇದಿಕೆ ಒತ್ತಾಯ:

Advertisement
ರಾಜ್ಯದ ಅತಿವೃಷ್ಟಿ- ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಯಿಂದ ಮಲೆನಾಡು ಪ್ರದೇಶವಾದ ಸುಳ್ಯ ತಾಲೂಕು ಕೈಬಿಟ್ಟಿರುವುದಕ್ಕೆ ಇಲಾಖೆಯ ಅಧಿಕಾರಿಗಳ ನಡೆಯನ್ನು ಮಲೆನಾಡು ಹಿತರಕ್ಷಣಾ ವೇದಿಕೆ ಖಂಡಿಸಿದ್ದು, ಈ ಬಗ್ಗೆ ಸರಕಾರ ಗಮನವಹಿಸದಿದ್ದಲ್ಲಿ ತಾಲೂಕು ಕೇಂದ್ರದ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.
ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಸಹಕಾರಿ ಸಂಘದಲ್ಲಿ ಜರಗಿದ ವೇದಿಕೆಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುಳ್ಯ ತಾಲೂಕನ್ನು ಅನೇಕ ಬಾರಿ ಈ ರೀತಿ ನಿರ್ಲಕ್ಷ್ಯ ವಹಿಸಲಾಗಿದೆ. ಜಿಲ್ಲೆಯಲ್ಲಿ ಅಧಿಕ ಮಳೆ ಹಾನಿ ಪೀಡಿತ ಪ್ರದೇಶವಾಗಿ ಸುಳ್ಯವು ರೂಪುಗೊಂಡಿದೆ. ಈ ಬಗ್ಗೆ ಸರಕಾರ ಗಮನಹರಿಸಿ ಅತಿವೃಷ್ಟಿ ಪೀಡಿತ ಪ್ರದೇಶವಾಗಿ ಸೇರ್ಪಡೆ ಗೊಳಿಸಬೇಕು. ಈ ಕುರಿತು ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ‌ ಸಲ್ಲಿಸಲು ವೇದಿಕೆ ಸಭೆಯು ನಿರ್ಣಯಿಸಿದೆ.
ಸಭೆಯಲ್ಲಿ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಸದಸ್ಯರುಗಳಾದ ಜಯಪ್ರಕಾಶ್ ಕೂಜುಗೋಡು, ರವೀಂದ್ರ ರುದ್ರಪಾದ, ಪ್ರದೀಪ್ ಕುಮಾರ್ ಕರಿಕೆ, ಅಭಿಲಾಷ್ ದುಗಲಡ್ಕ, ಲಿಖಿನ್ ಪೆರುಮುಂಡ, ಭರತ್ ಕನ್ನಡ್ಕ, ಭಾನುಪ್ರಕಾಶ್ ಪೆರುಮುಂಡ, ಅಭಿಷೇಕ್,  ಅಚ್ಚುತ ಗೌಡ, ಟಿ.ಎನ್. ಸತೀಶ ಕುಮಾರ್ ಕಲ್ಮಕಾರು,  ಚಂದ್ರಶೇಖರ ಕೊಲ್ಲಮೊಗ್ರು, ಬಸಪ್ಪ ಕೊಲ್ಲಮೊಗ್ರು, ಶೇಖರಪ್ಪ ಬೆಂಡೋಡಿ, ಉಮೇಶ್ ಕಜ್ಜೋಡಿ ಉಪಸ್ಥಿತರಿದ್ದರು.
ಸುಳ್ಯ ತಾಲೂಕನ್ನು  ಅತಿವೃಷ್ಟಿ ಪೀಡಿತ ಪ್ರದೇಶದ ಪಟ್ಟಿಗೆ ಶೀಘ್ರದಲ್ಲೇ ಸೇರಿಸಬೇಕು.ಇಲ್ಲದೇ ಇದ್ದರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು. – ಕಿಶೋರ್‌ ಶಿರಾಡಿ, ಸಂಚಾಲಕರು, ಮಲೆನಾಡು ಹಿತರಕ್ಷಣಾ ವೇದಿಕೆ
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

11 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

11 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

15 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

16 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

16 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

18 hours ago