ಸುಳ್ಯ : ಡಿ.27 ರಂದು ಮಾಹಿತಿ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರ

December 27, 2023
12:40 PM

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಸುಳ್ಯ, ತಾಲೂಕು ಕಚೇರಿ ಸುಳ್ಯ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ(Indian Red cross Organisation) ಸುಳ್ಯ(Sullia) ತಾಲೂಕು ಇವರ ಸಹಯೋಗದಲ್ಲಿ ಡಿಸೆಂಬರ್ 27 ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ “ರಕ್ತದಾನದಿಂದ ಆಗುವ ಪ್ರಯೋಜನಗಳು” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು “ರಕ್ತದಾನ ಶಿಬಿರ” ನಡೆಯಿತು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ.ರಾ.ಸ. ನೌಕರರ ಸಂಘ ಸುಳ್ಯ ಇದರ ಅಧ್ಯಕ್ಷರಾದ ತೀರ್ಥರಾಮ ಹೆಚ್.ಬಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸುಳ್ಯ ತಹಶೀಲ್ದಾರರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಇದರ ಅಧ್ಯಕ್ಷರಾದ ಮಂಜುನಾಥ್.ಜಿ 2024ರ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ರಾಜಣ್ಣ ಹಾಗೂ ಮೆಸ್ಕಾಂ ಸುಳ್ಯ ಇದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಹರೀಶ್.ಕೆ ನಾಯಕ್ ಇವರು ಉಪಸ್ಥಿತರಿರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಇದರ ಸಭಾಪತಿಗಳಾದ ಪಿ.ಬಿ ಸುಧಾಕರ ರೈ ಅವರು ರಕ್ತದಾನದಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿದರು.  ಗೌರವ ಉಪಸ್ಥಿತರಾಗಿ ಕ.ರಾ.ಸ. ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ಪೃಥ್ವಿಕುಮಾರ್.ಟಿ ಅವರು ಉಪಸ್ಥಿತರಿದ್ದರು.

Karnataka State Government Employees Association Taluk Branch Sullia, Taluk Office Sullia and Indian Red Cross Organization Sullia Taluk in collaboration with them on Wednesday 27th December at 9:30 AM at Sullia Taluk Panchayat Hall on the topic “Benefits of Blood Donation” Information Workshop and “Blood Donation Camp” will be held.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror