ಸುಮಲತಾ ದುರಹಂಕಾರದ ಮಾತನ್ನಾಡುತ್ತಿದ್ದಾರೆ | ಸಾಮಾನ್ಯ ಮಹಿಳೆಯನ್ನು ಕಣಕ್ಕೆ ಇಳಿಸಿ ಗೆಲ್ಲೋದು ಗೊತ್ತಿದೆ – ಹೆಚ್‌ಡಿಕೆ ವಾಗ್ದಾಳಿ

April 18, 2023
9:03 PM

 ಜೆಡಿಎಸ್ ಮಂಡ್ಯ ಜಿಲ್ಲೆಯ ಜನತೆಯ ದಳ. ಇಂತಹ ಜೆಡಿಎಸ್ ಅನ್ನು ಧೂಳೀಪಟ ಮಾಡುತ್ತೇನೆ ಎಂದು ಕೆಲವರು ದುರಹಂಕಾರದಲ್ಲಿ ಹೇಳುತ್ತಾ ಇದ್ದಾರೆ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಭಾಷಣ ಮಾಡುವ ವೇಳೆ ಸುಮಲತಾ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜನರಿಗಾಗಿ ಇರುವುದು ಜೆಡಿಎಸ್ ಪಕ್ಷ. ಇಂತಹ ಪಕ್ಷವನ್ನು ಯಾರು ಧೂಳೀಪಟ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಜನರಿಗೆ ಗೊತ್ತು ಎಂದು ಕಿಡಿಕಾರಿದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಮುಗಿಸಿದ್ದೇನೆ ಎಂದು ಹೇಳುತ್ತಾರೆ. ಇದಕ್ಕೆ ಉತ್ತರ ಮಂಡ್ಯ ಜಿಲ್ಲೆಯ ಜನರಿಂದ ನಾನು ಬಯಸುತ್ತಾ ಇದ್ದೇನೆ. ನನ್ನ ಕೈಯಲ್ಲಿ ಶಕ್ತಿ ಇಲ್ಲ, ನಮ್ಮದು ಸಣ್ಣ ಪಕ್ಷ. ರೈತರ ಈ ಪಕ್ಷವನ್ನು ಮುಗಿಸುತ್ತೇವೆ ಎಂದು ಸವಾಲು ಸ್ವೀಕಾರ ಮಾಡಿದ್ದಾರೆ. ನನಗೆ ಆಶ್ಚರ್ಯವಾಗಿದೆ ಕುಮಾರಣ್ಣ ಮಂಡ್ಯಗೆ ಬರ್ತಾರೆ ಎನ್ನುವುದು. ಯಾರು ಈ ಸುದ್ದಿಯನ್ನು ಹೊರಡಿಸಿದ್ದಾರೋ ಗೊತ್ತಿಲ್ಲ. ಈ ಸುದ್ದಿಯನ್ನು ಗಂಭೀರವಾಗಿ ತೆಗೆದುಕೊಂಡು, ಬರಲಿ ನಾನೇ ಅವರ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಉದ್ಧಟತನದ ಮಾತನ್ನು ಆಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕುಮಾರಣ್ಣ ಮಂಡ್ಯದಲ್ಲಿ ಬಂದು ನಿಲ್ಲಬೇಕಿಲ್ಲ. ಕುಮಾರಣ್ಣ ಮಂಡ್ಯ ಜಿಲ್ಲೆಯ ಜನರ ಮನಸ್ಸಿನಲ್ಲಿ ನೆಲೆಸಿದ್ದಾನೆ. ಮಂಡ್ಯ ಜನರಿಗೆ ದೇವೇಗೌಡರ ಕುಟುಂಬ ಮೋಸ ಮಾಡಿಲ್ಲ. ಜೆಡಿಎಸ್ ವಿರುದ್ಧ ಮಾತನಾಡುತ್ತಿರುವ ವ್ಯಕ್ತಿಯ ಪತಿಗೆ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾಗ ಗೌರವ ಕೊಟ್ಟಿದ್ದು ಜೆಡಿಎಸ್. ನಾನು ದುರಹಂಕಾರದ ಮಾತು ಆಡಲ್ಲ, ನಾನು ನಿಮ್ಮನ್ನು ನಂಬಿದ್ದೇನೆ. ನಮ್ಮ ಪಕ್ಷದ ಬಗ್ಗೆ ಮಾತನಾಡುವವರು ಸರ್ಟಿಫಿಕೇಟ್ ಕೊಡಲ್ಲ. ಮಂಡ್ಯದ ಜನರು ಸರ್ಟಿಫಿಕೇಟ್ ಕೊಡಬೇಕು. ಈ ಬಾರಿಯೂ ಮತ್ತೆ ಮಂಡ್ಯ ಜಿಲ್ಲೆಯಲ್ಲಿ 7 ಕ್ಷೇತ್ರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror