Advertisement
ಸುದ್ದಿಗಳು

ಸುಮಲತಾ ದುರಹಂಕಾರದ ಮಾತನ್ನಾಡುತ್ತಿದ್ದಾರೆ | ಸಾಮಾನ್ಯ ಮಹಿಳೆಯನ್ನು ಕಣಕ್ಕೆ ಇಳಿಸಿ ಗೆಲ್ಲೋದು ಗೊತ್ತಿದೆ – ಹೆಚ್‌ಡಿಕೆ ವಾಗ್ದಾಳಿ

Share

 ಜೆಡಿಎಸ್ ಮಂಡ್ಯ ಜಿಲ್ಲೆಯ ಜನತೆಯ ದಳ. ಇಂತಹ ಜೆಡಿಎಸ್ ಅನ್ನು ಧೂಳೀಪಟ ಮಾಡುತ್ತೇನೆ ಎಂದು ಕೆಲವರು ದುರಹಂಕಾರದಲ್ಲಿ ಹೇಳುತ್ತಾ ಇದ್ದಾರೆ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಭಾಷಣ ಮಾಡುವ ವೇಳೆ ಸುಮಲತಾ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜನರಿಗಾಗಿ ಇರುವುದು ಜೆಡಿಎಸ್ ಪಕ್ಷ. ಇಂತಹ ಪಕ್ಷವನ್ನು ಯಾರು ಧೂಳೀಪಟ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಜನರಿಗೆ ಗೊತ್ತು ಎಂದು ಕಿಡಿಕಾರಿದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಮುಗಿಸಿದ್ದೇನೆ ಎಂದು ಹೇಳುತ್ತಾರೆ. ಇದಕ್ಕೆ ಉತ್ತರ ಮಂಡ್ಯ ಜಿಲ್ಲೆಯ ಜನರಿಂದ ನಾನು ಬಯಸುತ್ತಾ ಇದ್ದೇನೆ. ನನ್ನ ಕೈಯಲ್ಲಿ ಶಕ್ತಿ ಇಲ್ಲ, ನಮ್ಮದು ಸಣ್ಣ ಪಕ್ಷ. ರೈತರ ಈ ಪಕ್ಷವನ್ನು ಮುಗಿಸುತ್ತೇವೆ ಎಂದು ಸವಾಲು ಸ್ವೀಕಾರ ಮಾಡಿದ್ದಾರೆ. ನನಗೆ ಆಶ್ಚರ್ಯವಾಗಿದೆ ಕುಮಾರಣ್ಣ ಮಂಡ್ಯಗೆ ಬರ್ತಾರೆ ಎನ್ನುವುದು. ಯಾರು ಈ ಸುದ್ದಿಯನ್ನು ಹೊರಡಿಸಿದ್ದಾರೋ ಗೊತ್ತಿಲ್ಲ. ಈ ಸುದ್ದಿಯನ್ನು ಗಂಭೀರವಾಗಿ ತೆಗೆದುಕೊಂಡು, ಬರಲಿ ನಾನೇ ಅವರ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಉದ್ಧಟತನದ ಮಾತನ್ನು ಆಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕುಮಾರಣ್ಣ ಮಂಡ್ಯದಲ್ಲಿ ಬಂದು ನಿಲ್ಲಬೇಕಿಲ್ಲ. ಕುಮಾರಣ್ಣ ಮಂಡ್ಯ ಜಿಲ್ಲೆಯ ಜನರ ಮನಸ್ಸಿನಲ್ಲಿ ನೆಲೆಸಿದ್ದಾನೆ. ಮಂಡ್ಯ ಜನರಿಗೆ ದೇವೇಗೌಡರ ಕುಟುಂಬ ಮೋಸ ಮಾಡಿಲ್ಲ. ಜೆಡಿಎಸ್ ವಿರುದ್ಧ ಮಾತನಾಡುತ್ತಿರುವ ವ್ಯಕ್ತಿಯ ಪತಿಗೆ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾಗ ಗೌರವ ಕೊಟ್ಟಿದ್ದು ಜೆಡಿಎಸ್. ನಾನು ದುರಹಂಕಾರದ ಮಾತು ಆಡಲ್ಲ, ನಾನು ನಿಮ್ಮನ್ನು ನಂಬಿದ್ದೇನೆ. ನಮ್ಮ ಪಕ್ಷದ ಬಗ್ಗೆ ಮಾತನಾಡುವವರು ಸರ್ಟಿಫಿಕೇಟ್ ಕೊಡಲ್ಲ. ಮಂಡ್ಯದ ಜನರು ಸರ್ಟಿಫಿಕೇಟ್ ಕೊಡಬೇಕು. ಈ ಬಾರಿಯೂ ಮತ್ತೆ ಮಂಡ್ಯ ಜಿಲ್ಲೆಯಲ್ಲಿ 7 ಕ್ಷೇತ್ರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

6 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

7 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

7 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

7 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

23 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

23 hours ago