Advertisement
ಸುದ್ದಿಗಳು

ಸುಮಲತಾ ದುರಹಂಕಾರದ ಮಾತನ್ನಾಡುತ್ತಿದ್ದಾರೆ | ಸಾಮಾನ್ಯ ಮಹಿಳೆಯನ್ನು ಕಣಕ್ಕೆ ಇಳಿಸಿ ಗೆಲ್ಲೋದು ಗೊತ್ತಿದೆ – ಹೆಚ್‌ಡಿಕೆ ವಾಗ್ದಾಳಿ

Share

 ಜೆಡಿಎಸ್ ಮಂಡ್ಯ ಜಿಲ್ಲೆಯ ಜನತೆಯ ದಳ. ಇಂತಹ ಜೆಡಿಎಸ್ ಅನ್ನು ಧೂಳೀಪಟ ಮಾಡುತ್ತೇನೆ ಎಂದು ಕೆಲವರು ದುರಹಂಕಾರದಲ್ಲಿ ಹೇಳುತ್ತಾ ಇದ್ದಾರೆ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Advertisement
Advertisement

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಭಾಷಣ ಮಾಡುವ ವೇಳೆ ಸುಮಲತಾ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜನರಿಗಾಗಿ ಇರುವುದು ಜೆಡಿಎಸ್ ಪಕ್ಷ. ಇಂತಹ ಪಕ್ಷವನ್ನು ಯಾರು ಧೂಳೀಪಟ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಜನರಿಗೆ ಗೊತ್ತು ಎಂದು ಕಿಡಿಕಾರಿದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಮುಗಿಸಿದ್ದೇನೆ ಎಂದು ಹೇಳುತ್ತಾರೆ. ಇದಕ್ಕೆ ಉತ್ತರ ಮಂಡ್ಯ ಜಿಲ್ಲೆಯ ಜನರಿಂದ ನಾನು ಬಯಸುತ್ತಾ ಇದ್ದೇನೆ. ನನ್ನ ಕೈಯಲ್ಲಿ ಶಕ್ತಿ ಇಲ್ಲ, ನಮ್ಮದು ಸಣ್ಣ ಪಕ್ಷ. ರೈತರ ಈ ಪಕ್ಷವನ್ನು ಮುಗಿಸುತ್ತೇವೆ ಎಂದು ಸವಾಲು ಸ್ವೀಕಾರ ಮಾಡಿದ್ದಾರೆ. ನನಗೆ ಆಶ್ಚರ್ಯವಾಗಿದೆ ಕುಮಾರಣ್ಣ ಮಂಡ್ಯಗೆ ಬರ್ತಾರೆ ಎನ್ನುವುದು. ಯಾರು ಈ ಸುದ್ದಿಯನ್ನು ಹೊರಡಿಸಿದ್ದಾರೋ ಗೊತ್ತಿಲ್ಲ. ಈ ಸುದ್ದಿಯನ್ನು ಗಂಭೀರವಾಗಿ ತೆಗೆದುಕೊಂಡು, ಬರಲಿ ನಾನೇ ಅವರ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಉದ್ಧಟತನದ ಮಾತನ್ನು ಆಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕುಮಾರಣ್ಣ ಮಂಡ್ಯದಲ್ಲಿ ಬಂದು ನಿಲ್ಲಬೇಕಿಲ್ಲ. ಕುಮಾರಣ್ಣ ಮಂಡ್ಯ ಜಿಲ್ಲೆಯ ಜನರ ಮನಸ್ಸಿನಲ್ಲಿ ನೆಲೆಸಿದ್ದಾನೆ. ಮಂಡ್ಯ ಜನರಿಗೆ ದೇವೇಗೌಡರ ಕುಟುಂಬ ಮೋಸ ಮಾಡಿಲ್ಲ. ಜೆಡಿಎಸ್ ವಿರುದ್ಧ ಮಾತನಾಡುತ್ತಿರುವ ವ್ಯಕ್ತಿಯ ಪತಿಗೆ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾಗ ಗೌರವ ಕೊಟ್ಟಿದ್ದು ಜೆಡಿಎಸ್. ನಾನು ದುರಹಂಕಾರದ ಮಾತು ಆಡಲ್ಲ, ನಾನು ನಿಮ್ಮನ್ನು ನಂಬಿದ್ದೇನೆ. ನಮ್ಮ ಪಕ್ಷದ ಬಗ್ಗೆ ಮಾತನಾಡುವವರು ಸರ್ಟಿಫಿಕೇಟ್ ಕೊಡಲ್ಲ. ಮಂಡ್ಯದ ಜನರು ಸರ್ಟಿಫಿಕೇಟ್ ಕೊಡಬೇಕು. ಈ ಬಾರಿಯೂ ಮತ್ತೆ ಮಂಡ್ಯ ಜಿಲ್ಲೆಯಲ್ಲಿ 7 ಕ್ಷೇತ್ರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

17 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

17 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

17 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

17 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago