MIRROR FOCUS

ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು | ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

Share

ವಾಡಿಕೆಯಂತೆ ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡು ಮಳೆ(Rain) ಸುರಿಯದೆ ಕೈಕೊಟ್ಟಿತ್ತು. ಅದರ ಅಂದಾಜಿನ ಮೇಲೆಯೇ ಈ ಬಾರಿಯ ಬೇಸಿಗೆ(Summer) ಭಾರಿ ಇರಲಿದೆ ಅನ್ನೋದನ್ನು ಊಹಿಸಲಾಗಿತ್ತು. ಅದೀಗ ಅನುಭವಕ್ಕೆ ಬರಲು ಆರಂಭವಾಗಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ(Temperature) ದಾಖಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.

Advertisement

ಎಲ್‌ನಿನೋ(L-Nino) ಪ್ರಭಾವದಿಂದ ಈ ವರ್ಷ ಸುಡುಬಿಸಿಲು ಹೆಚ್ಚಾಗಿರಲಿದೆ. ವಾಡಿಕೆಗಿಂತ ಹೆಚ್ಚು ಉಷ್ಣಾಂಶ ಇರಲಿದೆ. ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದು, ಮುಂದಿನ ಕೆಲ ದಿನಗಳ ತನಕ ಅತಿ ಹೆಚ್ಚು ಉಷ್ಣಾಂಶ ದಾಖಲಾಗಲಿದೆ. ಈ ವರ್ಷ ವಾಡಿಕೆಗಿಂತ ಅತಿಹೆಚ್ಚು ತಾಪಮಾನ ದಾಖಲಾಗಲಿದೆ. ಫೆಬ್ರವರಿ 6ರಂದು ಶೇಕಡಾ 33 ಡಿಗ್ರಿ ತಾಪಮಾನ ದಾಖಲಾಗಲಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಫೆಬ್ರವರಿ ತಿಂಗಳ ಮೂರನೇ ವಾರದಿಂದಲೇ ಬೆಂಗಳೂರು ಮತ್ತು ಸುತ್ತಮುತ್ತ ಬಿಸಿಲಿನ ಹೆಚ್ಚಳದ ಪ್ರಭಾವ ಎದುರಿಸಬೇಕಾಗುತ್ತದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಫೆಬ್ರವರಿ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಸರಾಸರಿ ಮಳೆ 7 ಮಿಲಿ ಮೀಟರ್ ಮಳೆಯಾಗುತ್ತದೆ. ಈ ವರ್ಷ ಮಾತ್ರ ಸರಾಸರಿಗಿಂತ ಕಡಿಮೆ ಮಳೆ ದಾಖಲಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿಯಾದ ಎಲ್ನಿನೋ ಪರಿಣಾಮವು ಪ್ರಬಲವಾಗಿದೆ. ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸೆಖೆ ಹೆಚ್ಚಾಗುತ್ತಿದೆ ಎಂದು ಐಎಂಡಿ ಬೆಂಗಳೂರಿನ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.

ತಾಂತ್ರಿಕವಾಗಿ ಫೆಬ್ರವರಿ ಚಳಿಗಾಲದ ತಿಂಗಳಾಗಿದ್ದರೂ, ಎಲ್ ನಿನೋ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ನಂತರ ಬಿಸಿಲು ಕಡಿಮೆಯಾಗಬಹುದು. ಆದರೆ ಪ್ರಸ್ತುತ ಪರಿಸ್ಥಿತಿಗಳು ಬೇಸಿಗೆಯ ವಿಸ್ತರಣೆಯನ್ನು ಸೂಚಿಸುತ್ತಿದ್ದು, ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು ಎಂದು ಎ ಪ್ರಸಾದ್ ಹೇಳಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

49 minutes ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

2 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

2 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಹವಾಮಾನ ವರದಿ | 10-04-2025 | ಎ.18 ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ

11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

17 hours ago

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

22 hours ago