Advertisement
MIRROR FOCUS

ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು | ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

Share

ವಾಡಿಕೆಯಂತೆ ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡು ಮಳೆ(Rain) ಸುರಿಯದೆ ಕೈಕೊಟ್ಟಿತ್ತು. ಅದರ ಅಂದಾಜಿನ ಮೇಲೆಯೇ ಈ ಬಾರಿಯ ಬೇಸಿಗೆ(Summer) ಭಾರಿ ಇರಲಿದೆ ಅನ್ನೋದನ್ನು ಊಹಿಸಲಾಗಿತ್ತು. ಅದೀಗ ಅನುಭವಕ್ಕೆ ಬರಲು ಆರಂಭವಾಗಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ(Temperature) ದಾಖಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.

ಎಲ್‌ನಿನೋ(L-Nino) ಪ್ರಭಾವದಿಂದ ಈ ವರ್ಷ ಸುಡುಬಿಸಿಲು ಹೆಚ್ಚಾಗಿರಲಿದೆ. ವಾಡಿಕೆಗಿಂತ ಹೆಚ್ಚು ಉಷ್ಣಾಂಶ ಇರಲಿದೆ. ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದು, ಮುಂದಿನ ಕೆಲ ದಿನಗಳ ತನಕ ಅತಿ ಹೆಚ್ಚು ಉಷ್ಣಾಂಶ ದಾಖಲಾಗಲಿದೆ. ಈ ವರ್ಷ ವಾಡಿಕೆಗಿಂತ ಅತಿಹೆಚ್ಚು ತಾಪಮಾನ ದಾಖಲಾಗಲಿದೆ. ಫೆಬ್ರವರಿ 6ರಂದು ಶೇಕಡಾ 33 ಡಿಗ್ರಿ ತಾಪಮಾನ ದಾಖಲಾಗಲಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಫೆಬ್ರವರಿ ತಿಂಗಳ ಮೂರನೇ ವಾರದಿಂದಲೇ ಬೆಂಗಳೂರು ಮತ್ತು ಸುತ್ತಮುತ್ತ ಬಿಸಿಲಿನ ಹೆಚ್ಚಳದ ಪ್ರಭಾವ ಎದುರಿಸಬೇಕಾಗುತ್ತದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಫೆಬ್ರವರಿ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಸರಾಸರಿ ಮಳೆ 7 ಮಿಲಿ ಮೀಟರ್ ಮಳೆಯಾಗುತ್ತದೆ. ಈ ವರ್ಷ ಮಾತ್ರ ಸರಾಸರಿಗಿಂತ ಕಡಿಮೆ ಮಳೆ ದಾಖಲಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿಯಾದ ಎಲ್ನಿನೋ ಪರಿಣಾಮವು ಪ್ರಬಲವಾಗಿದೆ. ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸೆಖೆ ಹೆಚ್ಚಾಗುತ್ತಿದೆ ಎಂದು ಐಎಂಡಿ ಬೆಂಗಳೂರಿನ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.

ತಾಂತ್ರಿಕವಾಗಿ ಫೆಬ್ರವರಿ ಚಳಿಗಾಲದ ತಿಂಗಳಾಗಿದ್ದರೂ, ಎಲ್ ನಿನೋ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ನಂತರ ಬಿಸಿಲು ಕಡಿಮೆಯಾಗಬಹುದು. ಆದರೆ ಪ್ರಸ್ತುತ ಪರಿಸ್ಥಿತಿಗಳು ಬೇಸಿಗೆಯ ವಿಸ್ತರಣೆಯನ್ನು ಸೂಚಿಸುತ್ತಿದ್ದು, ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು ಎಂದು ಎ ಪ್ರಸಾದ್ ಹೇಳಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

5 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

5 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

19 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago