Advertisement
MIRROR FOCUS

ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು | ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

Share

ವಾಡಿಕೆಯಂತೆ ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡು ಮಳೆ(Rain) ಸುರಿಯದೆ ಕೈಕೊಟ್ಟಿತ್ತು. ಅದರ ಅಂದಾಜಿನ ಮೇಲೆಯೇ ಈ ಬಾರಿಯ ಬೇಸಿಗೆ(Summer) ಭಾರಿ ಇರಲಿದೆ ಅನ್ನೋದನ್ನು ಊಹಿಸಲಾಗಿತ್ತು. ಅದೀಗ ಅನುಭವಕ್ಕೆ ಬರಲು ಆರಂಭವಾಗಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ(Temperature) ದಾಖಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.

ಎಲ್‌ನಿನೋ(L-Nino) ಪ್ರಭಾವದಿಂದ ಈ ವರ್ಷ ಸುಡುಬಿಸಿಲು ಹೆಚ್ಚಾಗಿರಲಿದೆ. ವಾಡಿಕೆಗಿಂತ ಹೆಚ್ಚು ಉಷ್ಣಾಂಶ ಇರಲಿದೆ. ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದು, ಮುಂದಿನ ಕೆಲ ದಿನಗಳ ತನಕ ಅತಿ ಹೆಚ್ಚು ಉಷ್ಣಾಂಶ ದಾಖಲಾಗಲಿದೆ. ಈ ವರ್ಷ ವಾಡಿಕೆಗಿಂತ ಅತಿಹೆಚ್ಚು ತಾಪಮಾನ ದಾಖಲಾಗಲಿದೆ. ಫೆಬ್ರವರಿ 6ರಂದು ಶೇಕಡಾ 33 ಡಿಗ್ರಿ ತಾಪಮಾನ ದಾಖಲಾಗಲಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಫೆಬ್ರವರಿ ತಿಂಗಳ ಮೂರನೇ ವಾರದಿಂದಲೇ ಬೆಂಗಳೂರು ಮತ್ತು ಸುತ್ತಮುತ್ತ ಬಿಸಿಲಿನ ಹೆಚ್ಚಳದ ಪ್ರಭಾವ ಎದುರಿಸಬೇಕಾಗುತ್ತದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಫೆಬ್ರವರಿ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಸರಾಸರಿ ಮಳೆ 7 ಮಿಲಿ ಮೀಟರ್ ಮಳೆಯಾಗುತ್ತದೆ. ಈ ವರ್ಷ ಮಾತ್ರ ಸರಾಸರಿಗಿಂತ ಕಡಿಮೆ ಮಳೆ ದಾಖಲಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿಯಾದ ಎಲ್ನಿನೋ ಪರಿಣಾಮವು ಪ್ರಬಲವಾಗಿದೆ. ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸೆಖೆ ಹೆಚ್ಚಾಗುತ್ತಿದೆ ಎಂದು ಐಎಂಡಿ ಬೆಂಗಳೂರಿನ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.

ತಾಂತ್ರಿಕವಾಗಿ ಫೆಬ್ರವರಿ ಚಳಿಗಾಲದ ತಿಂಗಳಾಗಿದ್ದರೂ, ಎಲ್ ನಿನೋ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ನಂತರ ಬಿಸಿಲು ಕಡಿಮೆಯಾಗಬಹುದು. ಆದರೆ ಪ್ರಸ್ತುತ ಪರಿಸ್ಥಿತಿಗಳು ಬೇಸಿಗೆಯ ವಿಸ್ತರಣೆಯನ್ನು ಸೂಚಿಸುತ್ತಿದ್ದು, ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು ಎಂದು ಎ ಪ್ರಸಾದ್ ಹೇಳಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago