ವೆದರ್ ಮಿರರ್

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

17.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೇರಳ ಗಡಿ ಭಾಗಗಳಲ್ಲಿ, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ದಿನಗಳು ಮತ್ತೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ, ಬಾಳೆಹೊನ್ನೂರು, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮತ್ತು ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಮತ್ತೆ ಆರಂಭವಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರದ ಕೊಳ್ಳೇಗಾಲ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯಲ್ಲಿ ಅಧಿಕ ಒತ್ತಡದ ತಿರುಗುವಿಕೆಯ ಲಕ್ಷಣಗಳಿದ್ದು, ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 20 ರ ನಂತರ ಮಳೆಯಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

4 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

11 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

22 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago