ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

May 3, 2026
10:27 AM
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ ಮಾದರಿಯಾಗಿದ್ದಾರೆ. ನವೀನ ತಂತ್ರಜ್ಞಾನ ಮತ್ತು ನೀರಿನ ಸಮರ್ಪಕ ಬಳಕೆಯಿಂದ ಕೃಷಿಯಲ್ಲಿ ಯಶಸ್ಸು ಸಾಧಿಸಬಹುದೆಂದು ಅವರು ತೋರಿಸಿದ್ದಾರೆ.

ಸಾಮಾನ್ಯವಾಗಿ ಬಿಸಿಲು ಮತ್ತು ಬರದ ನಾಡು ಎಂದು ಕರೆಯಲ್ಪಡುವ ಕಲಬುರಗಿಯಲ್ಲಿ ಬೇಸಿಗೆ ಸಮಯದಲ್ಲಿ ಕೃಷಿ ಚಟುವಟಿಕೆಗಳು ಕಡಿಮೆಯಾಗುವುದು ಸಹಜ. ಆದರೆ ಈ ಸಾಮಾನ್ಯ ಕಲ್ಪನೆಯನ್ನು ತಪ್ಪು ಎನ್ನುತ್ತಾ ಜಿಲ್ಲೆಯ ಜೇವರ್ಗಿ ತಾಲೂಕಿನ ಯಳವಾರ ಗ್ರಾಮದ ಯುವ ರೈತ ವಿಜಯಕುಮಾರ್ ಪಾಟೀಲ್ ವಿಭಿನ್ನ ಸಾಧನೆ ಮಾಡಿದ್ದಾರೆ.

ಬಿರು ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆಯುವ ಮೂಲಕ ಅವರು ಇತರ ರೈತರಿಗೆ ಮಾದರಿಯಾಗಿದ್ದಾರೆ. ಪದವಿ ಶಿಕ್ಷಣ ಪಡೆದ ವಿಜಯಕುಮಾರ್ ಪಾಟೀಲ್, ಆರಂಭದಲ್ಲಿ ಗುತ್ತಿಗೆದಾರರಾಗಿ ಜೀವನ ಆರಂಭಿಸಿದರೂ, ನಂತರ ತಮ್ಮ ಕುಟುಂಬದ ಕೃಷಿ ಪರಂಪರೆಯನ್ನು ಮುಂದುವರಿಸಲು ಕೃಷಿಯತ್ತ ಮುಖ ಮಾಡಿದರು.

ಮಳೆಗಾಲದಲ್ಲಿ ಹತ್ತಿ ಮತ್ತು ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುವ ಅವರು, ಬೇಸಿಗೆ ಕಾಲದಲ್ಲೂ ಪ್ರತಿ ಎಕರೆಗೆ ಸುಮಾರು 3 ರಿಂದ 4 ಕ್ವಿಂಟಲ್ ಎಳ್ಳು ಬೆಳೆಯುತ್ತಿದ್ದಾರೆ. ಇದು ಸಾಮಾನ್ಯವಾಗಿ ಬರ ಪ್ರದೇಶಗಳಲ್ಲಿ ಅಪರೂಪದ ಸಾಧನೆಯಾಗಿದೆ.

ಎಳ್ಳು ಬೆಳೆಯುವುದಕ್ಕೆ ಮಾತ್ರ ಸೀಮಿತವಾಗದೇ, ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ತಯಾರಿಸಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಗೆ ಸರಬರಾಜು ಮಾಡುತ್ತಿದ್ದಾರೆ. ಜೊತೆಗೆ ರೈತರಿಗೆ ತರಬೇತಿ ನೀಡಿ, ನೀರಿನ ಸಮರ್ಪಕ ಬಳಕೆ, ಬೀಜದ ಆಯ್ಕೆ ಮತ್ತು ರೋಗ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅವರ ಸಾಧನೆಯನ್ನು ಗುರುತಿಸಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ “ಶ್ರೇಷ್ಠ ಕೃಷಿ ಪ್ರಶಸ್ತಿ” ಹಾಗೂ “ಕೃಷಿ ಪಂಡಿತ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.

ಕೃಷಿ ವಿಜ್ಞಾನಿಗಳ ನೆರವಿನಿಂದ ಆರಂಭದಲ್ಲಿ 10 ಎಕರೆ ಪ್ರದೇಶದಲ್ಲಿ 42 ಕ್ವಿಂಟಲ್  ಎಳ್ಳು ಬೆಳೆದಿದ್ದೇನೆ.  ತಮ್ಮ ಕೃಷಿ ಚಟುವಟಿಕೆ ಕುರಿತು ಸಾಮಾಜಿಕ ಜಾಲಾತಾಣಗಳಲ್ಲಿ ಪ್ರಚಾರವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳು ಸೇರಿ ಹೊರ ರಾಜ್ಯಗಳಿಂದ ಬಿತ್ತನೆ ಬೀಜಕ್ಕೆ ಬೆಡಿಕೆ ಬರುತ್ತಿದೆ. ಉತ್ತಮ ಲಾಭ ಪಡೆದುಕೊಳ್ಳುತ್ತಿದ್ದೇನೆರೈತ ವಿಜಯ್ ಕುಮಾರ್ ಪಾಟೀಲ್

ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡಿರುವ ಅವರು, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 2 ಎಕರೆ ಪ್ರದೇಶದಲ್ಲಿ ಮೀನು ಹೊಂಡ ನಿರ್ಮಿಸಿ ಕೃಷಿಯೊಂದಿಗೆ ಮೀನು ಸಾಕಾಣಿಕೆ ಕೂಡ ಮಾಡುತ್ತಿದ್ದಾರೆ.

ಡಿಜಿಟಲ್ ಯುಗಕ್ಕೆ ತಕ್ಕಂತೆ ತಮ್ಮ ಉತ್ಪನ್ನಗಳ ಮಾರಾಟದಲ್ಲೂ ಹೊಸ ಮಾರ್ಗಗಳನ್ನು ಅನುಸರಿಸುತ್ತಿದ್ದು, ದೂರವಾಣಿ ಮತ್ತು ಆನ್‌ಲೈನ್ ಮೂಲಕ ಬಿತ್ತನೆ ಬೀಜಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಮಲ್ಲಪ್ಪ ಅವರ ಪ್ರಕಾರ, ಬೇಸಿಗೆಯಲ್ಲಿ ಕೃಷಿ ಮಾಡಲು ಹಿಂಜರಿಯುತ್ತಿದ್ದ ಪ್ರದೇಶದಲ್ಲಿ ವಿಜಯಕುಮಾರ್ ಪಾಟೀಲ್ ಅವರು ತರಬೇತಿ ಪಡೆದು ಯಶಸ್ವಿಯಾಗಿ ಎಳ್ಳು ಬೆಳೆಯುವ ಮೂಲಕ ಇತರ ರೈತರಿಗೆ ದಾರಿದೀಪರಾಗಿದ್ದಾರೆ.

ಒಟ್ಟಾರೆ, ಯುವಕರು ಕೃಷಿಯಿಂದ ದೂರವಾಗುತ್ತಿರುವ ಈ ಕಾಲದಲ್ಲಿ ವಿಜಯಕುಮಾರ್ ಪಾಟೀಲ್ ಅವರ ಸಾಧನೆ ಅನೇಕ ಯುವ ರೈತರಿಗೆ ಸ್ಪೂರ್ತಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

A young farmer from Yalwar village in Kalaburagi district, Vijaykumar Patil, has successfully cultivated sesame during peak summer, defying conventional farming patterns in drought-prone regions. By adopting modern techniques, efficient water use, and seed production, he not only achieved good yields but also built a market network across states. His efforts have earned him prestigious agricultural awards and recognition as a role model for young farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್
ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು
May 3, 2026
6:56 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror