ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

March 17, 2025
8:07 AM
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು, ಭಾನುವಾರ ತಲಪುವ ನಿರೀಕ್ಷೆ ಇದೆ ಎಂದು ನಾಸಾ ತಿಳಿಸಿದೆ.

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು, ಭಾನುವಾರ ತಲಪುವ ನಿರೀಕ್ಷೆ ಇದೆ ಎಂದು ನಾಸಾ ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರನ್ನು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ಮತ್ತು ರಷ್ಯಾದ ಗಗನಯಾತ್ರಿಯೊಂದಿಗೆ ಸ್ಪೇಸ್‌ಎಕ್ಸ್ ಕ್ರೂ ಡ್ರ್ಯಾಗನ್ ಕ್ರಾಫ್ಟ್‌ನಲ್ಲಿ ಸಾಗಿಸಲಾಗುವುದು, ಅದು ಭಾನುವಾರ ಮುಂಜಾನೆ ಭೂಮಿಗೆ ತಲುಪಲಿದೆ ಎಂದು ನಾಸಾ ಹೇಳಿದೆ.………ಮುಂದೆ ಓದಿ……..

ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಭೂಮಿಗೆ ಕರೆ ತರಲು ನಾಸಾ ವಿಜ್ಞಾನಿಗಳ ತಂಡ ಉಡಾವಣೆ ಮಾಡಿದ ಸ್ಪೇಸ್‌ಎಕ್ಸ್‌ ಡ್ರ್ಯಾಗನ್‌ ಸ್ಪೇಸ್‌ಕ್ರಾಫ್ಟ್‌ ‘ದಿ ಕ್ರ್ಯೂ-10’ ಭಾನುವಾರ ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿತ್ತು. ಅಲ್ಲಿನ ಸ್ಥಿತಿಗತಿ ಗಮನಿಸಿ ಇದೀಗ ಅಧಿಕೃತವಾದ ಹೇಳಿಕೆಯನ್ನು ನಾಸಾ ಹೇಳಿದೆ.

ಕಳೆದ ವರ್ಷದ ಜೂನ್‌ 5 ರಂದು ಬೋಯಿಂಗ್‌ನ ಸ್ಟಾರ್‌ಲೈನ್‌ ಗಗನನೌಕೆ ಮೂಲಕ ಸುನಿತಾ, ಬುಚ್‌ ಮತ್ತಿತರ ಗಗನಯಾತ್ರಿಗಳು ಗಗನಯಾನ ಕೈಗೊಂಡಿದ್ದರು. ಎಂಟು ದಿನಗಳ ಬಳಿಕ ಭೂಮಿಗೆ ಮರಳ ಬೇಕಿದ್ದ ಗಗನಯಾನಿಗಳು ನೌಕೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿದ್ದರು. ಇದೀಗ ಕರೆತರುವ ಪ್ರಯತ್ನದ ಬಳಿಕ ಗಗನಯಾತ್ರಿಗಳ ಭೂಮಿ ಪ್ರವೇಶವು  ಫ್ಲೋರಿಡಾ ಕರಾವಳಿಯಲ್ಲಿ ನಡೆಯಲಿದೆ ಎಂದು ನಾಸಾ ಭಾನುವಾರ ಸಂಜೆ ಹೇಳಿಕೆಯಲ್ಲಿ ತಿಳಿಸಿದೆ. ಹವಾಮಾನ ಪರಿಸ್ಥಿತಿ ಸಹಿತ ಇತರ ಎಲ್ಲಾ ಅಂಶಗಳನ್ನು ಗಮನಿಸಿಕೊಂಡು ನೌಕೆ ಇಳಿಯಲಿದೆ.

ನಾಸಾ ಗಗನಯಾತ್ರಿ ನಿಕ್ ಹೇಗ್ ಮತ್ತು ರೋಸ್ಕೋಸ್ಮೋಸ್ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಕೂಡ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಹಿಂತಿರುಗಲಿದ್ದಾರೆ, ಸೋಮವಾರ ಸಂಜೆಯಿಂದ  ಸಿದ್ಧತೆಗಳು ಪ್ರಾರಂಭವಾದಾಗ ಪ್ರಯಾಣವನ್ನು ನೇರ ಪ್ರಸಾರ ಮಾಡಲಾಗುವುದು ಎಂದೂ ನಾಸಾ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ಭವಿಷ್ಯ ಈ ತೀರ್ಪಿನಲ್ಲಿದೆಯೇ..? ಗುಟ್ಕಾ ಬೇರೆ, ಅಡಿಕೆ ಬೇರೆ ? ಸುಪ್ರೀಂ ಕೋರ್ಟ್ ಮುಂದೆ ಇರುವ ದೊಡ್ಡ ಪ್ರಶ್ನೆಗಳು..
August 20, 2026
3:57 PM
by: ದ ರೂರಲ್ ಮಿರರ್.ಕಾಂ
ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ
August 20, 2026
3:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ
August 20, 2026
1:01 PM
by: ಸಾಯಿಶೇಖರ್ ಕರಿಕಳ
ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?
August 20, 2026
12:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror