ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

March 17, 2025
8:07 AM
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು, ಭಾನುವಾರ ತಲಪುವ ನಿರೀಕ್ಷೆ ಇದೆ ಎಂದು ನಾಸಾ ತಿಳಿಸಿದೆ.

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು, ಭಾನುವಾರ ತಲಪುವ ನಿರೀಕ್ಷೆ ಇದೆ ಎಂದು ನಾಸಾ ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರನ್ನು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ಮತ್ತು ರಷ್ಯಾದ ಗಗನಯಾತ್ರಿಯೊಂದಿಗೆ ಸ್ಪೇಸ್‌ಎಕ್ಸ್ ಕ್ರೂ ಡ್ರ್ಯಾಗನ್ ಕ್ರಾಫ್ಟ್‌ನಲ್ಲಿ ಸಾಗಿಸಲಾಗುವುದು, ಅದು ಭಾನುವಾರ ಮುಂಜಾನೆ ಭೂಮಿಗೆ ತಲುಪಲಿದೆ ಎಂದು ನಾಸಾ ಹೇಳಿದೆ.………ಮುಂದೆ ಓದಿ……..

ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಭೂಮಿಗೆ ಕರೆ ತರಲು ನಾಸಾ ವಿಜ್ಞಾನಿಗಳ ತಂಡ ಉಡಾವಣೆ ಮಾಡಿದ ಸ್ಪೇಸ್‌ಎಕ್ಸ್‌ ಡ್ರ್ಯಾಗನ್‌ ಸ್ಪೇಸ್‌ಕ್ರಾಫ್ಟ್‌ ‘ದಿ ಕ್ರ್ಯೂ-10’ ಭಾನುವಾರ ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿತ್ತು. ಅಲ್ಲಿನ ಸ್ಥಿತಿಗತಿ ಗಮನಿಸಿ ಇದೀಗ ಅಧಿಕೃತವಾದ ಹೇಳಿಕೆಯನ್ನು ನಾಸಾ ಹೇಳಿದೆ.

ಕಳೆದ ವರ್ಷದ ಜೂನ್‌ 5 ರಂದು ಬೋಯಿಂಗ್‌ನ ಸ್ಟಾರ್‌ಲೈನ್‌ ಗಗನನೌಕೆ ಮೂಲಕ ಸುನಿತಾ, ಬುಚ್‌ ಮತ್ತಿತರ ಗಗನಯಾತ್ರಿಗಳು ಗಗನಯಾನ ಕೈಗೊಂಡಿದ್ದರು. ಎಂಟು ದಿನಗಳ ಬಳಿಕ ಭೂಮಿಗೆ ಮರಳ ಬೇಕಿದ್ದ ಗಗನಯಾನಿಗಳು ನೌಕೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿದ್ದರು. ಇದೀಗ ಕರೆತರುವ ಪ್ರಯತ್ನದ ಬಳಿಕ ಗಗನಯಾತ್ರಿಗಳ ಭೂಮಿ ಪ್ರವೇಶವು  ಫ್ಲೋರಿಡಾ ಕರಾವಳಿಯಲ್ಲಿ ನಡೆಯಲಿದೆ ಎಂದು ನಾಸಾ ಭಾನುವಾರ ಸಂಜೆ ಹೇಳಿಕೆಯಲ್ಲಿ ತಿಳಿಸಿದೆ. ಹವಾಮಾನ ಪರಿಸ್ಥಿತಿ ಸಹಿತ ಇತರ ಎಲ್ಲಾ ಅಂಶಗಳನ್ನು ಗಮನಿಸಿಕೊಂಡು ನೌಕೆ ಇಳಿಯಲಿದೆ.

ನಾಸಾ ಗಗನಯಾತ್ರಿ ನಿಕ್ ಹೇಗ್ ಮತ್ತು ರೋಸ್ಕೋಸ್ಮೋಸ್ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಕೂಡ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಹಿಂತಿರುಗಲಿದ್ದಾರೆ, ಸೋಮವಾರ ಸಂಜೆಯಿಂದ  ಸಿದ್ಧತೆಗಳು ಪ್ರಾರಂಭವಾದಾಗ ಪ್ರಯಾಣವನ್ನು ನೇರ ಪ್ರಸಾರ ಮಾಡಲಾಗುವುದು ಎಂದೂ ನಾಸಾ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror