MIRROR FOCUS

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು, ಭಾನುವಾರ ತಲಪುವ ನಿರೀಕ್ಷೆ ಇದೆ ಎಂದು ನಾಸಾ ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರನ್ನು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ಮತ್ತು ರಷ್ಯಾದ ಗಗನಯಾತ್ರಿಯೊಂದಿಗೆ ಸ್ಪೇಸ್‌ಎಕ್ಸ್ ಕ್ರೂ ಡ್ರ್ಯಾಗನ್ ಕ್ರಾಫ್ಟ್‌ನಲ್ಲಿ ಸಾಗಿಸಲಾಗುವುದು, ಅದು ಭಾನುವಾರ ಮುಂಜಾನೆ ಭೂಮಿಗೆ ತಲುಪಲಿದೆ ಎಂದು ನಾಸಾ ಹೇಳಿದೆ.………ಮುಂದೆ ಓದಿ……..

ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಭೂಮಿಗೆ ಕರೆ ತರಲು ನಾಸಾ ವಿಜ್ಞಾನಿಗಳ ತಂಡ ಉಡಾವಣೆ ಮಾಡಿದ ಸ್ಪೇಸ್‌ಎಕ್ಸ್‌ ಡ್ರ್ಯಾಗನ್‌ ಸ್ಪೇಸ್‌ಕ್ರಾಫ್ಟ್‌ ‘ದಿ ಕ್ರ್ಯೂ-10’ ಭಾನುವಾರ ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿತ್ತು. ಅಲ್ಲಿನ ಸ್ಥಿತಿಗತಿ ಗಮನಿಸಿ ಇದೀಗ ಅಧಿಕೃತವಾದ ಹೇಳಿಕೆಯನ್ನು ನಾಸಾ ಹೇಳಿದೆ.

ಕಳೆದ ವರ್ಷದ ಜೂನ್‌ 5 ರಂದು ಬೋಯಿಂಗ್‌ನ ಸ್ಟಾರ್‌ಲೈನ್‌ ಗಗನನೌಕೆ ಮೂಲಕ ಸುನಿತಾ, ಬುಚ್‌ ಮತ್ತಿತರ ಗಗನಯಾತ್ರಿಗಳು ಗಗನಯಾನ ಕೈಗೊಂಡಿದ್ದರು. ಎಂಟು ದಿನಗಳ ಬಳಿಕ ಭೂಮಿಗೆ ಮರಳ ಬೇಕಿದ್ದ ಗಗನಯಾನಿಗಳು ನೌಕೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿದ್ದರು. ಇದೀಗ ಕರೆತರುವ ಪ್ರಯತ್ನದ ಬಳಿಕ ಗಗನಯಾತ್ರಿಗಳ ಭೂಮಿ ಪ್ರವೇಶವು  ಫ್ಲೋರಿಡಾ ಕರಾವಳಿಯಲ್ಲಿ ನಡೆಯಲಿದೆ ಎಂದು ನಾಸಾ ಭಾನುವಾರ ಸಂಜೆ ಹೇಳಿಕೆಯಲ್ಲಿ ತಿಳಿಸಿದೆ. ಹವಾಮಾನ ಪರಿಸ್ಥಿತಿ ಸಹಿತ ಇತರ ಎಲ್ಲಾ ಅಂಶಗಳನ್ನು ಗಮನಿಸಿಕೊಂಡು ನೌಕೆ ಇಳಿಯಲಿದೆ.

ನಾಸಾ ಗಗನಯಾತ್ರಿ ನಿಕ್ ಹೇಗ್ ಮತ್ತು ರೋಸ್ಕೋಸ್ಮೋಸ್ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಕೂಡ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಹಿಂತಿರುಗಲಿದ್ದಾರೆ, ಸೋಮವಾರ ಸಂಜೆಯಿಂದ  ಸಿದ್ಧತೆಗಳು ಪ್ರಾರಂಭವಾದಾಗ ಪ್ರಯಾಣವನ್ನು ನೇರ ಪ್ರಸಾರ ಮಾಡಲಾಗುವುದು ಎಂದೂ ನಾಸಾ ಹೇಳಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು…

4 hours ago

ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ

2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ…

4 hours ago

ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ

ರಾಜ್ಯದಲ್ಲಿ  ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಕಳೆದ ವರ್ಷ 100 ಕಾಲುಸಂಕ ನಿರ್ಮಾಣ ಮಾಡಲಾಗಿದೆ.…

4 hours ago

ಉತ್ತರ ಕರ್ನಾಟಕದಲ್ಲಿ ಸೀಗೆ ಹುಣ್ಣಿಮೆ ಆಚರಣೆ | ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಉತ್ತಮ ಫಸಲಿಗೆ ಪ್ರಾರ್ಥನೆ

ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು…

4 hours ago

ಕರ್ನಾಟಕದಲ್ಲಿ ಮುಗಿಯದ ಸಮೀಕ್ಷೆ | ಗಡುವು ದೀಪಾವಳಿಯವರೆಗೆ ವಿಸ್ತರಣೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು…

4 hours ago