MIRROR FOCUS

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು, ಭಾನುವಾರ ತಲಪುವ ನಿರೀಕ್ಷೆ ಇದೆ ಎಂದು ನಾಸಾ ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರನ್ನು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ಮತ್ತು ರಷ್ಯಾದ ಗಗನಯಾತ್ರಿಯೊಂದಿಗೆ ಸ್ಪೇಸ್‌ಎಕ್ಸ್ ಕ್ರೂ ಡ್ರ್ಯಾಗನ್ ಕ್ರಾಫ್ಟ್‌ನಲ್ಲಿ ಸಾಗಿಸಲಾಗುವುದು, ಅದು ಭಾನುವಾರ ಮುಂಜಾನೆ ಭೂಮಿಗೆ ತಲುಪಲಿದೆ ಎಂದು ನಾಸಾ ಹೇಳಿದೆ.………ಮುಂದೆ ಓದಿ……..

Advertisement

ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಭೂಮಿಗೆ ಕರೆ ತರಲು ನಾಸಾ ವಿಜ್ಞಾನಿಗಳ ತಂಡ ಉಡಾವಣೆ ಮಾಡಿದ ಸ್ಪೇಸ್‌ಎಕ್ಸ್‌ ಡ್ರ್ಯಾಗನ್‌ ಸ್ಪೇಸ್‌ಕ್ರಾಫ್ಟ್‌ ‘ದಿ ಕ್ರ್ಯೂ-10’ ಭಾನುವಾರ ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿತ್ತು. ಅಲ್ಲಿನ ಸ್ಥಿತಿಗತಿ ಗಮನಿಸಿ ಇದೀಗ ಅಧಿಕೃತವಾದ ಹೇಳಿಕೆಯನ್ನು ನಾಸಾ ಹೇಳಿದೆ.

ಕಳೆದ ವರ್ಷದ ಜೂನ್‌ 5 ರಂದು ಬೋಯಿಂಗ್‌ನ ಸ್ಟಾರ್‌ಲೈನ್‌ ಗಗನನೌಕೆ ಮೂಲಕ ಸುನಿತಾ, ಬುಚ್‌ ಮತ್ತಿತರ ಗಗನಯಾತ್ರಿಗಳು ಗಗನಯಾನ ಕೈಗೊಂಡಿದ್ದರು. ಎಂಟು ದಿನಗಳ ಬಳಿಕ ಭೂಮಿಗೆ ಮರಳ ಬೇಕಿದ್ದ ಗಗನಯಾನಿಗಳು ನೌಕೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿದ್ದರು. ಇದೀಗ ಕರೆತರುವ ಪ್ರಯತ್ನದ ಬಳಿಕ ಗಗನಯಾತ್ರಿಗಳ ಭೂಮಿ ಪ್ರವೇಶವು  ಫ್ಲೋರಿಡಾ ಕರಾವಳಿಯಲ್ಲಿ ನಡೆಯಲಿದೆ ಎಂದು ನಾಸಾ ಭಾನುವಾರ ಸಂಜೆ ಹೇಳಿಕೆಯಲ್ಲಿ ತಿಳಿಸಿದೆ. ಹವಾಮಾನ ಪರಿಸ್ಥಿತಿ ಸಹಿತ ಇತರ ಎಲ್ಲಾ ಅಂಶಗಳನ್ನು ಗಮನಿಸಿಕೊಂಡು ನೌಕೆ ಇಳಿಯಲಿದೆ.

ನಾಸಾ ಗಗನಯಾತ್ರಿ ನಿಕ್ ಹೇಗ್ ಮತ್ತು ರೋಸ್ಕೋಸ್ಮೋಸ್ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಕೂಡ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಹಿಂತಿರುಗಲಿದ್ದಾರೆ, ಸೋಮವಾರ ಸಂಜೆಯಿಂದ  ಸಿದ್ಧತೆಗಳು ಪ್ರಾರಂಭವಾದಾಗ ಪ್ರಯಾಣವನ್ನು ನೇರ ಪ್ರಸಾರ ಮಾಡಲಾಗುವುದು ಎಂದೂ ನಾಸಾ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

8 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

18 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

19 hours ago

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…

24 hours ago

2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…

1 day ago