Advertisement
MIRROR FOCUS

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

Share

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು, ಭಾನುವಾರ ತಲಪುವ ನಿರೀಕ್ಷೆ ಇದೆ ಎಂದು ನಾಸಾ ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರನ್ನು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ಮತ್ತು ರಷ್ಯಾದ ಗಗನಯಾತ್ರಿಯೊಂದಿಗೆ ಸ್ಪೇಸ್‌ಎಕ್ಸ್ ಕ್ರೂ ಡ್ರ್ಯಾಗನ್ ಕ್ರಾಫ್ಟ್‌ನಲ್ಲಿ ಸಾಗಿಸಲಾಗುವುದು, ಅದು ಭಾನುವಾರ ಮುಂಜಾನೆ ಭೂಮಿಗೆ ತಲುಪಲಿದೆ ಎಂದು ನಾಸಾ ಹೇಳಿದೆ.………ಮುಂದೆ ಓದಿ……..

Advertisement

ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಭೂಮಿಗೆ ಕರೆ ತರಲು ನಾಸಾ ವಿಜ್ಞಾನಿಗಳ ತಂಡ ಉಡಾವಣೆ ಮಾಡಿದ ಸ್ಪೇಸ್‌ಎಕ್ಸ್‌ ಡ್ರ್ಯಾಗನ್‌ ಸ್ಪೇಸ್‌ಕ್ರಾಫ್ಟ್‌ ‘ದಿ ಕ್ರ್ಯೂ-10’ ಭಾನುವಾರ ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿತ್ತು. ಅಲ್ಲಿನ ಸ್ಥಿತಿಗತಿ ಗಮನಿಸಿ ಇದೀಗ ಅಧಿಕೃತವಾದ ಹೇಳಿಕೆಯನ್ನು ನಾಸಾ ಹೇಳಿದೆ.

ಕಳೆದ ವರ್ಷದ ಜೂನ್‌ 5 ರಂದು ಬೋಯಿಂಗ್‌ನ ಸ್ಟಾರ್‌ಲೈನ್‌ ಗಗನನೌಕೆ ಮೂಲಕ ಸುನಿತಾ, ಬುಚ್‌ ಮತ್ತಿತರ ಗಗನಯಾತ್ರಿಗಳು ಗಗನಯಾನ ಕೈಗೊಂಡಿದ್ದರು. ಎಂಟು ದಿನಗಳ ಬಳಿಕ ಭೂಮಿಗೆ ಮರಳ ಬೇಕಿದ್ದ ಗಗನಯಾನಿಗಳು ನೌಕೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿದ್ದರು. ಇದೀಗ ಕರೆತರುವ ಪ್ರಯತ್ನದ ಬಳಿಕ ಗಗನಯಾತ್ರಿಗಳ ಭೂಮಿ ಪ್ರವೇಶವು  ಫ್ಲೋರಿಡಾ ಕರಾವಳಿಯಲ್ಲಿ ನಡೆಯಲಿದೆ ಎಂದು ನಾಸಾ ಭಾನುವಾರ ಸಂಜೆ ಹೇಳಿಕೆಯಲ್ಲಿ ತಿಳಿಸಿದೆ. ಹವಾಮಾನ ಪರಿಸ್ಥಿತಿ ಸಹಿತ ಇತರ ಎಲ್ಲಾ ಅಂಶಗಳನ್ನು ಗಮನಿಸಿಕೊಂಡು ನೌಕೆ ಇಳಿಯಲಿದೆ.

ನಾಸಾ ಗಗನಯಾತ್ರಿ ನಿಕ್ ಹೇಗ್ ಮತ್ತು ರೋಸ್ಕೋಸ್ಮೋಸ್ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಕೂಡ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಹಿಂತಿರುಗಲಿದ್ದಾರೆ, ಸೋಮವಾರ ಸಂಜೆಯಿಂದ  ಸಿದ್ಧತೆಗಳು ಪ್ರಾರಂಭವಾದಾಗ ಪ್ರಯಾಣವನ್ನು ನೇರ ಪ್ರಸಾರ ಮಾಡಲಾಗುವುದು ಎಂದೂ ನಾಸಾ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

5 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

9 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

10 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

11 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

19 hours ago

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ

 ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…

19 hours ago