MIRROR FOCUS

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

Share

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು, ಭಾನುವಾರ ತಲಪುವ ನಿರೀಕ್ಷೆ ಇದೆ ಎಂದು ನಾಸಾ ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರನ್ನು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ಮತ್ತು ರಷ್ಯಾದ ಗಗನಯಾತ್ರಿಯೊಂದಿಗೆ ಸ್ಪೇಸ್‌ಎಕ್ಸ್ ಕ್ರೂ ಡ್ರ್ಯಾಗನ್ ಕ್ರಾಫ್ಟ್‌ನಲ್ಲಿ ಸಾಗಿಸಲಾಗುವುದು, ಅದು ಭಾನುವಾರ ಮುಂಜಾನೆ ಭೂಮಿಗೆ ತಲುಪಲಿದೆ ಎಂದು ನಾಸಾ ಹೇಳಿದೆ.………ಮುಂದೆ ಓದಿ……..

ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಭೂಮಿಗೆ ಕರೆ ತರಲು ನಾಸಾ ವಿಜ್ಞಾನಿಗಳ ತಂಡ ಉಡಾವಣೆ ಮಾಡಿದ ಸ್ಪೇಸ್‌ಎಕ್ಸ್‌ ಡ್ರ್ಯಾಗನ್‌ ಸ್ಪೇಸ್‌ಕ್ರಾಫ್ಟ್‌ ‘ದಿ ಕ್ರ್ಯೂ-10’ ಭಾನುವಾರ ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿತ್ತು. ಅಲ್ಲಿನ ಸ್ಥಿತಿಗತಿ ಗಮನಿಸಿ ಇದೀಗ ಅಧಿಕೃತವಾದ ಹೇಳಿಕೆಯನ್ನು ನಾಸಾ ಹೇಳಿದೆ.

ಕಳೆದ ವರ್ಷದ ಜೂನ್‌ 5 ರಂದು ಬೋಯಿಂಗ್‌ನ ಸ್ಟಾರ್‌ಲೈನ್‌ ಗಗನನೌಕೆ ಮೂಲಕ ಸುನಿತಾ, ಬುಚ್‌ ಮತ್ತಿತರ ಗಗನಯಾತ್ರಿಗಳು ಗಗನಯಾನ ಕೈಗೊಂಡಿದ್ದರು. ಎಂಟು ದಿನಗಳ ಬಳಿಕ ಭೂಮಿಗೆ ಮರಳ ಬೇಕಿದ್ದ ಗಗನಯಾನಿಗಳು ನೌಕೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿದ್ದರು. ಇದೀಗ ಕರೆತರುವ ಪ್ರಯತ್ನದ ಬಳಿಕ ಗಗನಯಾತ್ರಿಗಳ ಭೂಮಿ ಪ್ರವೇಶವು  ಫ್ಲೋರಿಡಾ ಕರಾವಳಿಯಲ್ಲಿ ನಡೆಯಲಿದೆ ಎಂದು ನಾಸಾ ಭಾನುವಾರ ಸಂಜೆ ಹೇಳಿಕೆಯಲ್ಲಿ ತಿಳಿಸಿದೆ. ಹವಾಮಾನ ಪರಿಸ್ಥಿತಿ ಸಹಿತ ಇತರ ಎಲ್ಲಾ ಅಂಶಗಳನ್ನು ಗಮನಿಸಿಕೊಂಡು ನೌಕೆ ಇಳಿಯಲಿದೆ.

ನಾಸಾ ಗಗನಯಾತ್ರಿ ನಿಕ್ ಹೇಗ್ ಮತ್ತು ರೋಸ್ಕೋಸ್ಮೋಸ್ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಕೂಡ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಹಿಂತಿರುಗಲಿದ್ದಾರೆ, ಸೋಮವಾರ ಸಂಜೆಯಿಂದ  ಸಿದ್ಧತೆಗಳು ಪ್ರಾರಂಭವಾದಾಗ ಪ್ರಯಾಣವನ್ನು ನೇರ ಪ್ರಸಾರ ಮಾಡಲಾಗುವುದು ಎಂದೂ ನಾಸಾ ಹೇಳಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

41 minutes ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

4 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

5 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

5 hours ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

5 hours ago

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…

5 hours ago