#weatherMirror| 07-08-2023 | ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆ | ಉತ್ತರ ಭಾರತದ ಕೆಲ ರಾಜ್ಯಗಳಿಗೆ ಮಳೆಯ ಮುನ್ನೆಚ್ಚರಿಕೆ

August 7, 2023
1:21 PM
ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿಲ್ಲ, ದೇಶದ ಹಲವೆಡೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇಂದು ನೀಡಿರುವ ವರದಿಯ ಪ್ರಕಾರ ಇಂದು ಗುಜಾರಾತ್‌ನ ಅಲ್ಲಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮೋಡ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಕರಾವಳಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಇನ್ನೂ ಎರಡು ದಿನಗಳ ಮಟ್ಟಿಗೆ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮುಂಗಾರು ದುರ್ಬಲವಾಗಿದ್ದರಿಂದ ಘಟ್ಟ ಪ್ರದೇಶಗಳಿಗೆ ಮೋಡಗಳು ಸಾಗಲು ಶಕ್ತವಾಗಿಲ್ಲ. ಆ.9ರ ನಂತರ ಕರಾವಳಿಯಲ್ಲಿಯೂ ಮಳೆ ಕ್ಷೀಣಿಸಲಿದೆ.

ದೇಶದ ವಿವಿದೆಡೆ ಭಾರೀ ಮಳೆ

ದೇಶದ ಹಲವೆಡೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇಂದು ನೀಡಿರುವ ವರದಿಯ ಪ್ರಕಾರ  ಗುಜಾರಾತ್‌ನ ಜುನಾಗಢ, ಗಿರ್ಸೋಮನಾಥ, ಸಬರಕಾಂತ, ಅರಾವಳಿ, ಮಹಿಸಾಗರ, ದಾಹೋದ್‌ನಲ್ಲಿ ಅಲ್ಲಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇದೆ.

ವಡೋದರಾ, ಚೋಟೌಡೆಪುರ್, ಭರೂಚ್, ನರ್ಮದಾ, ಸೂರತ್, ತಾಪಿ, ನವಸಾರಿ, ಡಾಂಗ್, ವಲ್ಸಾದ್, ದಾದ್ರಾ ನಗರ್ ಹವೇಲಿ, ದಮನ್‌ನ ಕೆಲವು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯಲ್ಲಿ ಆಳವಾದ ವಾಯುಭಾರ ಕುಸಿತ ಉಂಟಾಗಲಿದ್ದು, ಒಡಿಶಾ ಮತ್ತು ಮಧ್ಯಪ್ರದೇಶದ ಮೂಲಕ ಗುಜರಾತ್‌ಗೆ ಮಳೆ ಸುರಿಯಲಿದೆ ಎಂದು ಅಂಬಾಲಾಲ್ ಪಟೇಲ್ ಭವಿಷ್ಯ ನುಡಿದಿದ್ದಾರೆ. ಇದರಿಂದ ರೈತರ ಬೆಳೆಗಳು ಹಾಳಾಗುವ ಸಾಧ್ಯತೆಯೂ ವ್ಯಕ್ತವಾಗಿದೆ. ಆಶ್ಲೇಷಾ ನಕ್ಷತ್ರವಾಗಿ ಮಳೆ ಬೆಳೆಗಳಿಗೆ ಹಾನಿಕರ.

ಗುಜರಾತ್‌ನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ನರ್ಮದಾ, ಸಬರಮತಿ, ತಾಪಿ ಸೇರಿದಂತೆ ಹಲವು ನದಿಗಳು ಎರಡೂ ದಡಗಳಲ್ಲಿ ಇರುತ್ತವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror