ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

April 23, 2026
3:10 PM
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಲಾಗಿದೆ.

ರಾಜ್ಯಾದ್ಯಂತ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಮೈಸೂರಿನ ಪ್ರತಿಷ್ಠಿತ ಕೆ.ಆರ್. ಆಸ್ಪತ್ರೆ   ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಬಿಸಿಲಿನ ತೀವ್ರತೆಗೆ ತುತ್ತಾಗಿ ಅಸ್ವಸ್ಥರಾಗುವವರಿಗೆ ತಕ್ಷಣದ ಚಿಕಿತ್ಸೆ ಒದಗಿಸಲು ಆಸ್ಪತ್ರೆಯಲ್ಲಿ ಪ್ರತ್ಯೇಕ ಸನ್ ಸ್ಟ್ರೋಕ್ ವಾರ್ಡ್ ಅನ್ನು ಆರಂಭಿಸಲಾಗಿದೆ. ಈ ಕುರಿತು ಆಸ್ಪತ್ರೆ ಅಧೀಕ್ಷಕಿ ಡಾ. ಶೋಭಾ  ಮಾಹಿತಿ ನೀಡಿದ್ದಾರೆ.

ವಾರ್ಡ್‌ನಲ್ಲಿ ಒಟ್ಟು 30 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, ತುರ್ತು ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಸಿದ್ಧಪಡಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ, ಔಷಧೋಪಚಾರ ಹಾಗೂ ತ್ವರಿತ ಸೇವೆಗಳ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ತಾಪಮಾನ ಏರಿಕೆಯಿಂದಾಗಿ ಜನರಲ್ಲಿ ಉಷ್ಣಾಘಾತ (ಸನ್ ಸ್ಟ್ರೋಕ್) ಪ್ರಕರಣಗಳು ಹೆಚ್ಚುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ಈ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಬಿಸಿಲಿನ ಸಮಯದಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಿಕೊಳ್ಳಬೇಕು ಹಾಗೂ ನೀರು, ಪಾನೀಯಗಳನ್ನು ಹೆಚ್ಚು ಸೇವಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

With rising temperatures across Karnataka, Mysuru’s KR Hospital has opened a dedicated sunstroke ward with 30 beds to provide immediate treatment. Authorities urge people to take precautions against heat-related illnesses.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror