Advertisement
MIRROR FOCUS

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

Share

ರಾಜ್ಯಾದ್ಯಂತ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಮೈಸೂರಿನ ಪ್ರತಿಷ್ಠಿತ ಕೆ.ಆರ್. ಆಸ್ಪತ್ರೆ   ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಬಿಸಿಲಿನ ತೀವ್ರತೆಗೆ ತುತ್ತಾಗಿ ಅಸ್ವಸ್ಥರಾಗುವವರಿಗೆ ತಕ್ಷಣದ ಚಿಕಿತ್ಸೆ ಒದಗಿಸಲು ಆಸ್ಪತ್ರೆಯಲ್ಲಿ ಪ್ರತ್ಯೇಕ ಸನ್ ಸ್ಟ್ರೋಕ್ ವಾರ್ಡ್ ಅನ್ನು ಆರಂಭಿಸಲಾಗಿದೆ. ಈ ಕುರಿತು ಆಸ್ಪತ್ರೆ ಅಧೀಕ್ಷಕಿ ಡಾ. ಶೋಭಾ  ಮಾಹಿತಿ ನೀಡಿದ್ದಾರೆ.

ವಾರ್ಡ್‌ನಲ್ಲಿ ಒಟ್ಟು 30 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, ತುರ್ತು ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಸಿದ್ಧಪಡಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ, ಔಷಧೋಪಚಾರ ಹಾಗೂ ತ್ವರಿತ ಸೇವೆಗಳ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ತಾಪಮಾನ ಏರಿಕೆಯಿಂದಾಗಿ ಜನರಲ್ಲಿ ಉಷ್ಣಾಘಾತ (ಸನ್ ಸ್ಟ್ರೋಕ್) ಪ್ರಕರಣಗಳು ಹೆಚ್ಚುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ಈ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಬಿಸಿಲಿನ ಸಮಯದಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಿಕೊಳ್ಳಬೇಕು ಹಾಗೂ ನೀರು, ಪಾನೀಯಗಳನ್ನು ಹೆಚ್ಚು ಸೇವಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

With rising temperatures across Karnataka, Mysuru’s KR Hospital has opened a dedicated sunstroke ward with 30 beds to provide immediate treatment. Authorities urge people to take precautions against heat-related illnesses.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

10 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

10 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago