ರಾಜ್ಯಾದ್ಯಂತ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಮೈಸೂರಿನ ಪ್ರತಿಷ್ಠಿತ ಕೆ.ಆರ್. ಆಸ್ಪತ್ರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಬಿಸಿಲಿನ ತೀವ್ರತೆಗೆ ತುತ್ತಾಗಿ ಅಸ್ವಸ್ಥರಾಗುವವರಿಗೆ ತಕ್ಷಣದ ಚಿಕಿತ್ಸೆ ಒದಗಿಸಲು ಆಸ್ಪತ್ರೆಯಲ್ಲಿ ಪ್ರತ್ಯೇಕ ಸನ್ ಸ್ಟ್ರೋಕ್ ವಾರ್ಡ್ ಅನ್ನು ಆರಂಭಿಸಲಾಗಿದೆ. ಈ ಕುರಿತು ಆಸ್ಪತ್ರೆ ಅಧೀಕ್ಷಕಿ ಡಾ. ಶೋಭಾ ಮಾಹಿತಿ ನೀಡಿದ್ದಾರೆ.
ವಾರ್ಡ್ನಲ್ಲಿ ಒಟ್ಟು 30 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, ತುರ್ತು ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಸಿದ್ಧಪಡಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ, ಔಷಧೋಪಚಾರ ಹಾಗೂ ತ್ವರಿತ ಸೇವೆಗಳ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯದಲ್ಲಿ ತಾಪಮಾನ ಏರಿಕೆಯಿಂದಾಗಿ ಜನರಲ್ಲಿ ಉಷ್ಣಾಘಾತ (ಸನ್ ಸ್ಟ್ರೋಕ್) ಪ್ರಕರಣಗಳು ಹೆಚ್ಚುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ಈ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಬಿಸಿಲಿನ ಸಮಯದಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಿಕೊಳ್ಳಬೇಕು ಹಾಗೂ ನೀರು, ಪಾನೀಯಗಳನ್ನು ಹೆಚ್ಚು ಸೇವಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.
With rising temperatures across Karnataka, Mysuru’s KR Hospital has opened a dedicated sunstroke ward with 30 beds to provide immediate treatment. Authorities urge people to take precautions against heat-related illnesses.
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…