Advertisement
MIRROR FOCUS

ಮುಂದಿನ ವರ್ಷ “ಸೂಪರ್‌ ಎಲ್‌ ನಿನೋ ” ಸಾಧ್ಯತೆ | ಎಚ್ಚರಿಕೆ ನೀಡಿದ ಹವಾಮಾನ ಸಂಸ್ಥೆ | ಮುಂದಿನ ವರ್ಷ ಬರಗಾಲವೋ..? ಜಲ ಪ್ರಳಯವೋ..? |

Share

ಈ ವರ್ಷ ಮಳೆಯ ಸಮಸ್ಯೆ ಕಾಡಿದ್ದಾಯಿತು. ಎಲ್ಲೆಡೆಯೂ ಸಮಸ್ಯೆಯೇ ಸಮಸ್ಯೆ. ಬಹುಪಾಲು ಬರಗಾಲವೇ ಕಂಡಿದೆ. ಇದೀಗ ಮುಂದಿನ ವರ್ಷದ ಆತಂಕ ಆರಂಭವಾಗಿದೆ. ಇದಕ್ಕೆ ಕಾರಣವಾದ್ದು ಯುಎಸ್‌ ಮೂಲದ ಹವಾಮಾನ ಸಂಸ್ಥೆ ಮುಂದಿನ ವರ್ಷ ಸೂಪರ್‌ ಎಲ್‌ ನಿನೋ ಬಗ್ಗೆ ಎಚ್ಚರಿಸಿದೆ.

Advertisement

ಈ ವರ್ಷ ಮಳೆಗಾಲವೇ ಇಲ್ಲವೇನೋ ಎಂದು ದೇಶದ ಕೆಲವು ಭಾಗಗಳಲ್ಲಿ ಅನ್ನಿಸಿದರೆ ಇನ್ನು ಕೆಲವು ಭಾಗಗಳಲ್ಲಿ ಸಾಕೋ ಸಾಕು ಅನ್ನಿಸುವಷ್ಟು ಮಳೆಯಾಗಿತ್ತು. ಈಗ ಆತಂಕ ಹುಟ್ಟಿಸಿರುವ ವಿಚಾರ ಎಂದರೆ ಮುಂದಿನ ವರ್ಷ ಪೆಸಿಫಿಕ್‌ ಸಾಗರದಲ್ಲಿ “ಸೂಪರ್‌ ಎಲ್‌ನಿನೋ’(Super El Nino) ಉಂಟಾಗಬಹುದು ಎಂದು ಅಮೆರಿಕದ ಹವಾಮಾನ ಸಂಸ್ಥೆ ಎಚ್ಚರಿಸಿದೆ.

ಪೆಸಿಫಿಕ್‌ ಅಥವಾ ಶಾಂತಸಾಗರದ ಉತ್ತರ ಅಮೆರಿಕದ ಬದಿ ಮತ್ತು ದಕ್ಷಿಣ ಅಮೆರಿಕದ ಬದಿಗಳಲ್ಲಿ ಸಾಗರದ ನೀರಿನ ಉಷ್ಣತೆ ಇಡೀ ಜಗತ್ತಿನ ಹವಾಮಾನವನ್ನು ಪ್ರಭಾವಿಸುತ್ತದೆ ಎನ್ನುವುದು ಎಲ್ಲರೂ ತಿಳಿದಿರುವ ಸತ್ಯ. ಶಾಂತ ಸಾಗರದ ಉತ್ತರ ಅಮೆರಿಕ ಕಡೆಯಲ್ಲಿ ಶೀತ ನೀರು ಮತ್ತು ದಕ್ಷಿಣ ಅಮೆರಿಕ ಬದಿಯಲ್ಲಿ ಉಷ್ಣ ನೀರು ಇರುತ್ತದೆ. ಸಾಗರದ ಒಳಗೆ ಉಷ್ಣ ಮತ್ತು ಶೀತ ಅಂತರ್‌ಪ್ರವಾಹಗಳಿರುತ್ತವೆ. ದಕ್ಷಿಣ ಅಮೆರಿಕ ಬದಿಯ ನೀರು ಸಹಜಕ್ಕಿಂತ ಹೆಚ್ಚು ಬಿಸಿಯಾದರೆ ಎಲ್‌ ನಿನೋ ಉಂಟಾಗುತ್ತದೆ. ಉತ್ತರ ಅಮೆರಿಕ ಬದಿಯ ಶೀತ ನೀರು ವಾಡಿಕೆಗಿಂತ ಹೆಚ್ಚು ತಂಪಾದರೆ ಲಾ ನಿನೋ ತಲೆದೋರುತ್ತದೆ.

ಇವೆರಡೂ ಸ್ಥಿತಿಗಳು ಜಾಗತಿಕ ಹವಾಮಾನ ಸ್ಥಿತಿಗತಿಯಲ್ಲಿ ಅಲ್ಲೋಲಕಲ್ಲೋಲ ಉಂಟು ಮಾಡಬಲ್ಲವು. ಈ ವರ್ಷದ ಮಳೆಗಾಲದ ಅವಾಂತರಗಳಿಗೆ ಎಲ್‌ ನಿನೋ ಕಾರಣ. ಮುಂದಿನ ವರ್ಷ ಇದು “ಸೂಪರ್‌ ಎಲ್‌ ನಿನೋ’ ಆಗಿ ಮರುಕಳಿಸಬಹುದು ಎನ್ನುವುದು ಅಮೆರಿಕದ ಹವಾಮಾನ ಸಂಸ್ಥೆ ಎಚ್ಚರಿಸಿದೆ. ಇದರ ಬೆನ್ನಿಗೇ ಕೃಷಿ ವಲಯದಲ್ಲಿ ಚರ್ಚೆ ಆರಂಭವಾಗಿದೆ.

ಈಗಾಗಲೇ ತಾಳೆ ಕೃಷಿಯ ಬಗ್ಗೆ ಚರ್ಚೆ ನಡೆದಿದೆ. ಎಲ್ ನಿನೊವು ವಿಶ್ವದ ಪ್ರಮುಖ ತಾಳೆ ಎಣ್ಣೆ ಬೆಳೆಯುವ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದು 2024 ರ  ಇಳುವರಿ ಮೇಲೆ ಪರಿಣಾಮ ಬೀರುತ್ತದೆ. ಎಲ್ ನಿನೋ-ಸಂಬಂಧಿತ ತೇವಾಂಶದ ಕೊರತೆಯು ಇಂಡೋನೇಷ್ಯಾದ ಹಲವಾರು ಭಾಗಗಳಲ್ಲಿ ಸಮಸ್ಯೆಯಾಗುತ್ತದೆ.

ಭಾರತದಲ್ಲಿ, ಎಲ್ ನಿನೋ ಸಾಮಾನ್ಯವಾಗಿ  ಮಾನ್ಸೂನ್ ಮಾರುತಗಳಿಗೆ ಸಂಬಂಧಿಸುತ್ತವೆ. ಮಳೆಯ ಮೇಲೆ ತೀರಾ ಪರಿಣಾಮ ಕೊಡುತ್ತವೆ. ಮಾನ್ಸೂನ್ ಅವಧಿಯಲ್ಲಿ ಕಡಿಮೆ ಮಳೆಗೆ ಕಾರಣವಾಗಬಹುದು. ಆದರೆ ಸೂಪರ್ ಎಲ್ ನಿನೊವು ಭಾರತದಲ್ಲಿ ವಿಶಿಷ್ಟ ಹವಾಮಾನ ಮಾದರಿಗಳನ್ನು ಸೃಷ್ಟಿಸಬಹುದು. ಇದರಿಂದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಕೆಲವು ಪ್ರದೇಶಗಳಲ್ಲಿ ಮಳೆಯ ತೀವ್ರ ಕೊರತೆ ಕಾಣಬಹುದು.ಇದುವರೆಗಿನ ಹವಾಮಾನ ಘಟನೆಗೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಕಡಿಮೆ ಮಳೆಯ ಪ್ರಭಾವ ಇರುತ್ತದೆ. ಆದರೆ ಕೃಷಿ ವಲಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬೆಳೆ ಕೊರತೆ, ನೀರಿನ ಕೊರತೆ ಕೃಷಿ ಕ್ಷೇತ್ರದ ಮೇಲೆ ಹೊಡೆತ ಬೀಳಬಹುದು. ಇದರಿಂದ ಆಹಾರ ಉತ್ಪಾದನೆ ಸೇರಿದಂತೆ ಎಲ್ಲಾ ವಿಭಾಗದಲ್ಲೂ ಸಮಸ್ಯೆಯಾಗಬಹುದು.

ಸಾಗರದ ನೀರು 1.5 ಡಿಗ್ರಿ ಸೆಂಟಿಗ್ರೇಡ್‌ನ‌ಷ್ಟು ಬಿಸಿಯಾಗಿ “ಬಲವಾದ ಎಲ್‌ನಿನೋ’ ಉಂಟಾಗುವ ಸಾಧ್ಯತೆ ಶೇ. 75-80 ಇದ್ದರೆ,  2 ಡಿಗ್ರಿ ಸೆಂಟಿಗ್ರೇಡ್‌ಗಿಂತ ಹೆಚ್ಚಿ “ಸೂಪರ್‌ ಎಲ್‌ನಿನೋ’ ತಲೆದೋರುವ ಸಂಭವ ಶೇ. 30 ಇದೆ ಎನ್ನುವುದು ಈ ಹವಾಮಾನ ತಜ್ಞರ ಅಂಬೋಣ.1997-98 ಮತ್ತು 2015-16 ರ  ಐತಿಹಾಸಿಕವಾಗಿ ಪ್ರಬಲ ಘಟನೆಗಳ ಸಂಭವನೀಯತೆ ಪ್ರಕಾರ ಕೆಲವು ಕಡೆ ಭಾರೀ ಮಳೆ ಇದ್ದು , ಇನ್ನೂ ಕೆಲವು ಕಡೆ ಮಳೆಯ ಕೊರತೆ ಪ್ರಪಂಚದಾದ್ಯಂತ ಇತ್ತು.

ಈ ವರ್ಷದ ಬರಗಾಲ ಸ್ಥಿತಿಯ ಪರಿಣಾಮ ಇನ್ನು ಮುಂದಿನ ದಿನಗಳಲ್ಲಿ ಅನುಭವಕ್ಕೆ ಬರಬೇಕಷ್ಟೇ. ಅದಾದ ಬೆನ್ನಿಗೆ ಸೂಪರ್‌ ಎಲ್‌ ನಿನೋ ಬಗ್ಗೆ ಹವಾಮಾನ ಸಂಸ್ಥೆ ಎಚ್ಚರಿಸಿದೆ. ಈ ಬಗ್ಗೆ ಈಗಾಗಲೇ ಕೆಲವು ದೇಶಗಳ ಕೃಷಿ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಭಾರತದಲ್ಲಿ ಈ ಬಗ್ಗೆ ಇನ್ನಷ್ಟೇ ಯೋಚನೆ ಆರಂಭವಾಗಬೇಕಿದೆ.

Over the past few years, this change has become more evident. In some parts of the country, it rained so much that it seemed to be enough in some parts of the country. The issue that has raised concern is the prospect of a "Super El Nino" in the Pacific Ocean next year, according to the US National Oceanic and Atmospheric Administration.Over the past few years, this change has become more evident. In some parts of the country, it rained so much that it seemed to be enough in some parts of the country. The issue that has raised concern is the prospect of a "Super El Niño" in the Pacific Ocean next year, according to the US National Oceanic and Atmospheric Administration.
Source : Weather News
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

13 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

13 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

13 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

13 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

13 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

13 hours ago