ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.
ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮಹಾತ್ಮ ಗಾಂಧಿ ವಿದೇಶಿ ಉತ್ಪನ್ನಗಳಿಗೆ ಕಡಿವಾಣ ಹಾಕಿ ಖಾದಿ ಉತ್ಪನ್ನಗಳನ್ನು ನೇಯುವ ಮೂಲಕ ಸ್ವದೇಶಿ ಉತ್ಪನ್ನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ದೇಶದ ಅಸ್ಮಿತೆ, ಸ್ವಾವಲಂಬನೆಯ ಪ್ರತೀಕವಾದ ಖಾದಿ ಉಳಿಸಿ ಬೆಳೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಸರ್ಕಾರದಿಂದ ಯಾದಗಿರಿ ಜಿಲ್ಲೆಯಲ್ಲಿ 15 ದಿನಗಳ ಕಾಲ ರಾಜ್ಯ ಮಟ್ಟದ ಖಾದಿ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಜನರು ಖಾದಿ ಉತ್ಪನ್ನಗಳನ್ನು ಖರೀದಿಸುವಂತೆ ಮನವಿ ಮಾಡಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…