ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.
ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮಹಾತ್ಮ ಗಾಂಧಿ ವಿದೇಶಿ ಉತ್ಪನ್ನಗಳಿಗೆ ಕಡಿವಾಣ ಹಾಕಿ ಖಾದಿ ಉತ್ಪನ್ನಗಳನ್ನು ನೇಯುವ ಮೂಲಕ ಸ್ವದೇಶಿ ಉತ್ಪನ್ನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ದೇಶದ ಅಸ್ಮಿತೆ, ಸ್ವಾವಲಂಬನೆಯ ಪ್ರತೀಕವಾದ ಖಾದಿ ಉಳಿಸಿ ಬೆಳೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಸರ್ಕಾರದಿಂದ ಯಾದಗಿರಿ ಜಿಲ್ಲೆಯಲ್ಲಿ 15 ದಿನಗಳ ಕಾಲ ರಾಜ್ಯ ಮಟ್ಟದ ಖಾದಿ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಜನರು ಖಾದಿ ಉತ್ಪನ್ನಗಳನ್ನು ಖರೀದಿಸುವಂತೆ ಮನವಿ ಮಾಡಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…