MIRROR FOCUS

ಹತ್ತಿ ಬೆಳೆಗೆ ಬೆಂಬಲ ಬೆಲೆ | ಯಾದಗಿರಿಯಲ್ಲಿ 21 ಕೇಂದ್ರಗಳ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿ ಮಾಡಲು 21 ಖರೀದಿ ಕೇಂದ್ರಗಳನ್ನು ತೆರೆದಿದ್ದು, ಈ ಮೂಲಕ ರೈತರಿಗೆ ನೆರವಾಗಿದೆ. 

Advertisement
Advertisement

ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಬೆಳೆಗಾರರ ಸಂಖ್ಯೆ ಹೆಚ್ಚಿದ್ದು, 2024-25 ನೇ ಸಾಲಿನಲ್ಲಿ ಜಿಲ್ಲೆಯ ನೀರಾವರಿ ಪ್ರದೇಶದಲ್ಲಿ,89600 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, 48600 ಎಕ್ರೆ ಪ್ರದೇಶದಲ್ಲಿ  ಮಾತ್ರ ಹತ್ತಿ ಬೆಳೆಯಲಾಗಿದೆ. ಖುಷ್ಕಿ ಪ್ರದೇಶದಲ್ಲಿ 1  ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. ಒಟ್ಟಾರೆ 1.96 ಲಕ್ಷಕ್ಕೂ ಹೆಚ್ಚು ಪ್ರದೇಶದಲ್ಲಿ  ಹತ್ತಿ ಬೆಳೆ ಬೆಳೆಯಲಾಗಿದೆ.

ವಿವಿಧ ತಳಿಗಳಿಗೆ,  ವಿವಿಧ ರೀತಿಯ ದರ ನಿಗದಿಪಡಿಸಲಾಗಿದ್ದು, 6871 ರೂಪಾಯಿಯಿಂದ 7521   ರೂಪಾಯಿವರೆಗೆ ದರ  ನಿಗದಿಪಡಿಸಲಾಗಿದೆ. ಹೀಗಾಗಿ ರೈತರು ತಾವು ಬೆಳೆದ ಹತ್ತಿಯನ್ನು ಖರೀದಿ ಕೇಂದ್ರಗಳಿಗೆ ತೆರಳಿ,  ಮಾರಾಟ ಮಾಡುತ್ತಿದ್ದು, ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತದಿಂದ, ಜಿಲ್ಲೆಯ ವಿವಿಧೆಡೆ ಜಿನ್ನಿಂಗ್ ಮತ್ತು ಪ್ರೆಸ್ಸಿಂಗ್ ಘಟಕಗಳನ್ನು ಗುರುತಿಸಿ, ಈ ಘಟಕಗಳನ್ನು ಮಾರುಕಟ್ಟೆ ಉಪ ಪ್ರಾಂಗಣ ಎಂದು ಗುರುತಿಸಲಾಗಿದೆ.

ರೈತರು ತಾವು ಬೆಳೆದ ಹತ್ತಿಯನ್ನು ಈ ಪ್ರಾಂಗಣದಲ್ಲಿ ತಂದು ಮಾರಾಟ ಮಾಡಬಹುದು. ಈ ಕೇಂದ್ರಗಳಲ್ಲಿ ಹತ್ತಿ ಮಾರಾಟ ಮಾಡಿ, ಉತ್ತಮ ಬೆಲೆ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಮತ್ತು ಪಹಣಿಯನ್ನು ಕೊಂಡೊಯ್ಯಬೇಕು.

ಹತ್ತಿ ಬೆಳೆಗಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರು ತಾವು ಬೆಳೆದ ಹತ್ತಿಯನ್ನು ನೇರವಾಗಿ ಸರ್ಕಾರಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಮಾಡುವುದು ಇದರ ಉದ್ದೇಶ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ, ಯಮನಪ್ಪ ಚಿತ್ತಾಪುರ ಹೇಳಿದ್ದಾರೆ.

Advertisement

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಯೋಜನೆಯಡಿ ಹತ್ತಿ ಖರೀದಿ ಮಾಡುತ್ತಿರುವುದು ಖುಷಿಯ ವಿಚಾರ, ಇತರ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಿದರೆ ರೈತರಿಗೆ ಅನುಕೂಲವಾಗಿದೆ ಎಂದು ರೈತರು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

2 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

2 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

4 hours ago

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…

4 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…

4 hours ago

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

9 hours ago