MIRROR FOCUS

ಹತ್ತಿ ಬೆಳೆಗೆ ಬೆಂಬಲ ಬೆಲೆ | ಯಾದಗಿರಿಯಲ್ಲಿ 21 ಕೇಂದ್ರಗಳ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿ ಮಾಡಲು 21 ಖರೀದಿ ಕೇಂದ್ರಗಳನ್ನು ತೆರೆದಿದ್ದು, ಈ ಮೂಲಕ ರೈತರಿಗೆ ನೆರವಾಗಿದೆ. 

Advertisement

ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಬೆಳೆಗಾರರ ಸಂಖ್ಯೆ ಹೆಚ್ಚಿದ್ದು, 2024-25 ನೇ ಸಾಲಿನಲ್ಲಿ ಜಿಲ್ಲೆಯ ನೀರಾವರಿ ಪ್ರದೇಶದಲ್ಲಿ,89600 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, 48600 ಎಕ್ರೆ ಪ್ರದೇಶದಲ್ಲಿ  ಮಾತ್ರ ಹತ್ತಿ ಬೆಳೆಯಲಾಗಿದೆ. ಖುಷ್ಕಿ ಪ್ರದೇಶದಲ್ಲಿ 1  ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. ಒಟ್ಟಾರೆ 1.96 ಲಕ್ಷಕ್ಕೂ ಹೆಚ್ಚು ಪ್ರದೇಶದಲ್ಲಿ  ಹತ್ತಿ ಬೆಳೆ ಬೆಳೆಯಲಾಗಿದೆ.

ವಿವಿಧ ತಳಿಗಳಿಗೆ,  ವಿವಿಧ ರೀತಿಯ ದರ ನಿಗದಿಪಡಿಸಲಾಗಿದ್ದು, 6871 ರೂಪಾಯಿಯಿಂದ 7521   ರೂಪಾಯಿವರೆಗೆ ದರ  ನಿಗದಿಪಡಿಸಲಾಗಿದೆ. ಹೀಗಾಗಿ ರೈತರು ತಾವು ಬೆಳೆದ ಹತ್ತಿಯನ್ನು ಖರೀದಿ ಕೇಂದ್ರಗಳಿಗೆ ತೆರಳಿ,  ಮಾರಾಟ ಮಾಡುತ್ತಿದ್ದು, ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತದಿಂದ, ಜಿಲ್ಲೆಯ ವಿವಿಧೆಡೆ ಜಿನ್ನಿಂಗ್ ಮತ್ತು ಪ್ರೆಸ್ಸಿಂಗ್ ಘಟಕಗಳನ್ನು ಗುರುತಿಸಿ, ಈ ಘಟಕಗಳನ್ನು ಮಾರುಕಟ್ಟೆ ಉಪ ಪ್ರಾಂಗಣ ಎಂದು ಗುರುತಿಸಲಾಗಿದೆ.

ರೈತರು ತಾವು ಬೆಳೆದ ಹತ್ತಿಯನ್ನು ಈ ಪ್ರಾಂಗಣದಲ್ಲಿ ತಂದು ಮಾರಾಟ ಮಾಡಬಹುದು. ಈ ಕೇಂದ್ರಗಳಲ್ಲಿ ಹತ್ತಿ ಮಾರಾಟ ಮಾಡಿ, ಉತ್ತಮ ಬೆಲೆ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಮತ್ತು ಪಹಣಿಯನ್ನು ಕೊಂಡೊಯ್ಯಬೇಕು.

ಹತ್ತಿ ಬೆಳೆಗಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರು ತಾವು ಬೆಳೆದ ಹತ್ತಿಯನ್ನು ನೇರವಾಗಿ ಸರ್ಕಾರಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಮಾಡುವುದು ಇದರ ಉದ್ದೇಶ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ, ಯಮನಪ್ಪ ಚಿತ್ತಾಪುರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಯೋಜನೆಯಡಿ ಹತ್ತಿ ಖರೀದಿ ಮಾಡುತ್ತಿರುವುದು ಖುಷಿಯ ವಿಚಾರ, ಇತರ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಿದರೆ ರೈತರಿಗೆ ಅನುಕೂಲವಾಗಿದೆ ಎಂದು ರೈತರು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

2 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

2 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

11 hours ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

19 hours ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

21 hours ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago