Advertisement
MIRROR FOCUS

ಹತ್ತಿ ಬೆಳೆಗೆ ಬೆಂಬಲ ಬೆಲೆ | ಯಾದಗಿರಿಯಲ್ಲಿ 21 ಕೇಂದ್ರಗಳ ಆರಂಭ

Share

ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿ ಮಾಡಲು 21 ಖರೀದಿ ಕೇಂದ್ರಗಳನ್ನು ತೆರೆದಿದ್ದು, ಈ ಮೂಲಕ ರೈತರಿಗೆ ನೆರವಾಗಿದೆ. 

ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಬೆಳೆಗಾರರ ಸಂಖ್ಯೆ ಹೆಚ್ಚಿದ್ದು, 2024-25 ನೇ ಸಾಲಿನಲ್ಲಿ ಜಿಲ್ಲೆಯ ನೀರಾವರಿ ಪ್ರದೇಶದಲ್ಲಿ,89600 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, 48600 ಎಕ್ರೆ ಪ್ರದೇಶದಲ್ಲಿ  ಮಾತ್ರ ಹತ್ತಿ ಬೆಳೆಯಲಾಗಿದೆ. ಖುಷ್ಕಿ ಪ್ರದೇಶದಲ್ಲಿ 1  ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. ಒಟ್ಟಾರೆ 1.96 ಲಕ್ಷಕ್ಕೂ ಹೆಚ್ಚು ಪ್ರದೇಶದಲ್ಲಿ  ಹತ್ತಿ ಬೆಳೆ ಬೆಳೆಯಲಾಗಿದೆ.

ವಿವಿಧ ತಳಿಗಳಿಗೆ,  ವಿವಿಧ ರೀತಿಯ ದರ ನಿಗದಿಪಡಿಸಲಾಗಿದ್ದು, 6871 ರೂಪಾಯಿಯಿಂದ 7521   ರೂಪಾಯಿವರೆಗೆ ದರ  ನಿಗದಿಪಡಿಸಲಾಗಿದೆ. ಹೀಗಾಗಿ ರೈತರು ತಾವು ಬೆಳೆದ ಹತ್ತಿಯನ್ನು ಖರೀದಿ ಕೇಂದ್ರಗಳಿಗೆ ತೆರಳಿ,  ಮಾರಾಟ ಮಾಡುತ್ತಿದ್ದು, ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತದಿಂದ, ಜಿಲ್ಲೆಯ ವಿವಿಧೆಡೆ ಜಿನ್ನಿಂಗ್ ಮತ್ತು ಪ್ರೆಸ್ಸಿಂಗ್ ಘಟಕಗಳನ್ನು ಗುರುತಿಸಿ, ಈ ಘಟಕಗಳನ್ನು ಮಾರುಕಟ್ಟೆ ಉಪ ಪ್ರಾಂಗಣ ಎಂದು ಗುರುತಿಸಲಾಗಿದೆ.

ರೈತರು ತಾವು ಬೆಳೆದ ಹತ್ತಿಯನ್ನು ಈ ಪ್ರಾಂಗಣದಲ್ಲಿ ತಂದು ಮಾರಾಟ ಮಾಡಬಹುದು. ಈ ಕೇಂದ್ರಗಳಲ್ಲಿ ಹತ್ತಿ ಮಾರಾಟ ಮಾಡಿ, ಉತ್ತಮ ಬೆಲೆ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಮತ್ತು ಪಹಣಿಯನ್ನು ಕೊಂಡೊಯ್ಯಬೇಕು.

ಹತ್ತಿ ಬೆಳೆಗಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರು ತಾವು ಬೆಳೆದ ಹತ್ತಿಯನ್ನು ನೇರವಾಗಿ ಸರ್ಕಾರಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಮಾಡುವುದು ಇದರ ಉದ್ದೇಶ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ, ಯಮನಪ್ಪ ಚಿತ್ತಾಪುರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಯೋಜನೆಯಡಿ ಹತ್ತಿ ಖರೀದಿ ಮಾಡುತ್ತಿರುವುದು ಖುಷಿಯ ವಿಚಾರ, ಇತರ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಿದರೆ ರೈತರಿಗೆ ಅನುಕೂಲವಾಗಿದೆ ಎಂದು ರೈತರು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

2 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

3 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

4 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

5 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

18 hours ago