Advertisement
MIRROR FOCUS

ಹತ್ತಿ ಬೆಳೆಗೆ ಬೆಂಬಲ ಬೆಲೆ | ಯಾದಗಿರಿಯಲ್ಲಿ 21 ಕೇಂದ್ರಗಳ ಆರಂಭ

Share

ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿ ಮಾಡಲು 21 ಖರೀದಿ ಕೇಂದ್ರಗಳನ್ನು ತೆರೆದಿದ್ದು, ಈ ಮೂಲಕ ರೈತರಿಗೆ ನೆರವಾಗಿದೆ. 

ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಬೆಳೆಗಾರರ ಸಂಖ್ಯೆ ಹೆಚ್ಚಿದ್ದು, 2024-25 ನೇ ಸಾಲಿನಲ್ಲಿ ಜಿಲ್ಲೆಯ ನೀರಾವರಿ ಪ್ರದೇಶದಲ್ಲಿ,89600 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, 48600 ಎಕ್ರೆ ಪ್ರದೇಶದಲ್ಲಿ  ಮಾತ್ರ ಹತ್ತಿ ಬೆಳೆಯಲಾಗಿದೆ. ಖುಷ್ಕಿ ಪ್ರದೇಶದಲ್ಲಿ 1  ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. ಒಟ್ಟಾರೆ 1.96 ಲಕ್ಷಕ್ಕೂ ಹೆಚ್ಚು ಪ್ರದೇಶದಲ್ಲಿ  ಹತ್ತಿ ಬೆಳೆ ಬೆಳೆಯಲಾಗಿದೆ.

ವಿವಿಧ ತಳಿಗಳಿಗೆ,  ವಿವಿಧ ರೀತಿಯ ದರ ನಿಗದಿಪಡಿಸಲಾಗಿದ್ದು, 6871 ರೂಪಾಯಿಯಿಂದ 7521   ರೂಪಾಯಿವರೆಗೆ ದರ  ನಿಗದಿಪಡಿಸಲಾಗಿದೆ. ಹೀಗಾಗಿ ರೈತರು ತಾವು ಬೆಳೆದ ಹತ್ತಿಯನ್ನು ಖರೀದಿ ಕೇಂದ್ರಗಳಿಗೆ ತೆರಳಿ,  ಮಾರಾಟ ಮಾಡುತ್ತಿದ್ದು, ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತದಿಂದ, ಜಿಲ್ಲೆಯ ವಿವಿಧೆಡೆ ಜಿನ್ನಿಂಗ್ ಮತ್ತು ಪ್ರೆಸ್ಸಿಂಗ್ ಘಟಕಗಳನ್ನು ಗುರುತಿಸಿ, ಈ ಘಟಕಗಳನ್ನು ಮಾರುಕಟ್ಟೆ ಉಪ ಪ್ರಾಂಗಣ ಎಂದು ಗುರುತಿಸಲಾಗಿದೆ.

ರೈತರು ತಾವು ಬೆಳೆದ ಹತ್ತಿಯನ್ನು ಈ ಪ್ರಾಂಗಣದಲ್ಲಿ ತಂದು ಮಾರಾಟ ಮಾಡಬಹುದು. ಈ ಕೇಂದ್ರಗಳಲ್ಲಿ ಹತ್ತಿ ಮಾರಾಟ ಮಾಡಿ, ಉತ್ತಮ ಬೆಲೆ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಮತ್ತು ಪಹಣಿಯನ್ನು ಕೊಂಡೊಯ್ಯಬೇಕು.

ಹತ್ತಿ ಬೆಳೆಗಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರು ತಾವು ಬೆಳೆದ ಹತ್ತಿಯನ್ನು ನೇರವಾಗಿ ಸರ್ಕಾರಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಮಾಡುವುದು ಇದರ ಉದ್ದೇಶ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ, ಯಮನಪ್ಪ ಚಿತ್ತಾಪುರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಯೋಜನೆಯಡಿ ಹತ್ತಿ ಖರೀದಿ ಮಾಡುತ್ತಿರುವುದು ಖುಷಿಯ ವಿಚಾರ, ಇತರ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಿದರೆ ರೈತರಿಗೆ ಅನುಕೂಲವಾಗಿದೆ ಎಂದು ರೈತರು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

7 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

15 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

21 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

21 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

21 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

22 hours ago