ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿ ಮಾಡಲು 21 ಖರೀದಿ ಕೇಂದ್ರಗಳನ್ನು ತೆರೆದಿದ್ದು, ಈ ಮೂಲಕ ರೈತರಿಗೆ ನೆರವಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಬೆಳೆಗಾರರ ಸಂಖ್ಯೆ ಹೆಚ್ಚಿದ್ದು, 2024-25 ನೇ ಸಾಲಿನಲ್ಲಿ ಜಿಲ್ಲೆಯ ನೀರಾವರಿ ಪ್ರದೇಶದಲ್ಲಿ,89600 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, 48600 ಎಕ್ರೆ ಪ್ರದೇಶದಲ್ಲಿ ಮಾತ್ರ ಹತ್ತಿ ಬೆಳೆಯಲಾಗಿದೆ. ಖುಷ್ಕಿ ಪ್ರದೇಶದಲ್ಲಿ 1 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. ಒಟ್ಟಾರೆ 1.96 ಲಕ್ಷಕ್ಕೂ ಹೆಚ್ಚು ಪ್ರದೇಶದಲ್ಲಿ ಹತ್ತಿ ಬೆಳೆ ಬೆಳೆಯಲಾಗಿದೆ.
ವಿವಿಧ ತಳಿಗಳಿಗೆ, ವಿವಿಧ ರೀತಿಯ ದರ ನಿಗದಿಪಡಿಸಲಾಗಿದ್ದು, 6871 ರೂಪಾಯಿಯಿಂದ 7521 ರೂಪಾಯಿವರೆಗೆ ದರ ನಿಗದಿಪಡಿಸಲಾಗಿದೆ. ಹೀಗಾಗಿ ರೈತರು ತಾವು ಬೆಳೆದ ಹತ್ತಿಯನ್ನು ಖರೀದಿ ಕೇಂದ್ರಗಳಿಗೆ ತೆರಳಿ, ಮಾರಾಟ ಮಾಡುತ್ತಿದ್ದು, ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತದಿಂದ, ಜಿಲ್ಲೆಯ ವಿವಿಧೆಡೆ ಜಿನ್ನಿಂಗ್ ಮತ್ತು ಪ್ರೆಸ್ಸಿಂಗ್ ಘಟಕಗಳನ್ನು ಗುರುತಿಸಿ, ಈ ಘಟಕಗಳನ್ನು ಮಾರುಕಟ್ಟೆ ಉಪ ಪ್ರಾಂಗಣ ಎಂದು ಗುರುತಿಸಲಾಗಿದೆ.
ರೈತರು ತಾವು ಬೆಳೆದ ಹತ್ತಿಯನ್ನು ಈ ಪ್ರಾಂಗಣದಲ್ಲಿ ತಂದು ಮಾರಾಟ ಮಾಡಬಹುದು. ಈ ಕೇಂದ್ರಗಳಲ್ಲಿ ಹತ್ತಿ ಮಾರಾಟ ಮಾಡಿ, ಉತ್ತಮ ಬೆಲೆ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಮತ್ತು ಪಹಣಿಯನ್ನು ಕೊಂಡೊಯ್ಯಬೇಕು.
ಹತ್ತಿ ಬೆಳೆಗಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರು ತಾವು ಬೆಳೆದ ಹತ್ತಿಯನ್ನು ನೇರವಾಗಿ ಸರ್ಕಾರಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಮಾಡುವುದು ಇದರ ಉದ್ದೇಶ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ, ಯಮನಪ್ಪ ಚಿತ್ತಾಪುರ ಹೇಳಿದ್ದಾರೆ.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಯೋಜನೆಯಡಿ ಹತ್ತಿ ಖರೀದಿ ಮಾಡುತ್ತಿರುವುದು ಖುಷಿಯ ವಿಚಾರ, ಇತರ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಿದರೆ ರೈತರಿಗೆ ಅನುಕೂಲವಾಗಿದೆ ಎಂದು ರೈತರು ಹೇಳಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…