Advertisement
MIRROR FOCUS

ಹತ್ತಿ ಬೆಳೆಗೆ ಬೆಂಬಲ ಬೆಲೆ | ಯಾದಗಿರಿಯಲ್ಲಿ 21 ಕೇಂದ್ರಗಳ ಆರಂಭ

Share

ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿ ಮಾಡಲು 21 ಖರೀದಿ ಕೇಂದ್ರಗಳನ್ನು ತೆರೆದಿದ್ದು, ಈ ಮೂಲಕ ರೈತರಿಗೆ ನೆರವಾಗಿದೆ. 

ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಬೆಳೆಗಾರರ ಸಂಖ್ಯೆ ಹೆಚ್ಚಿದ್ದು, 2024-25 ನೇ ಸಾಲಿನಲ್ಲಿ ಜಿಲ್ಲೆಯ ನೀರಾವರಿ ಪ್ರದೇಶದಲ್ಲಿ,89600 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, 48600 ಎಕ್ರೆ ಪ್ರದೇಶದಲ್ಲಿ  ಮಾತ್ರ ಹತ್ತಿ ಬೆಳೆಯಲಾಗಿದೆ. ಖುಷ್ಕಿ ಪ್ರದೇಶದಲ್ಲಿ 1  ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. ಒಟ್ಟಾರೆ 1.96 ಲಕ್ಷಕ್ಕೂ ಹೆಚ್ಚು ಪ್ರದೇಶದಲ್ಲಿ  ಹತ್ತಿ ಬೆಳೆ ಬೆಳೆಯಲಾಗಿದೆ.

ವಿವಿಧ ತಳಿಗಳಿಗೆ,  ವಿವಿಧ ರೀತಿಯ ದರ ನಿಗದಿಪಡಿಸಲಾಗಿದ್ದು, 6871 ರೂಪಾಯಿಯಿಂದ 7521   ರೂಪಾಯಿವರೆಗೆ ದರ  ನಿಗದಿಪಡಿಸಲಾಗಿದೆ. ಹೀಗಾಗಿ ರೈತರು ತಾವು ಬೆಳೆದ ಹತ್ತಿಯನ್ನು ಖರೀದಿ ಕೇಂದ್ರಗಳಿಗೆ ತೆರಳಿ,  ಮಾರಾಟ ಮಾಡುತ್ತಿದ್ದು, ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತದಿಂದ, ಜಿಲ್ಲೆಯ ವಿವಿಧೆಡೆ ಜಿನ್ನಿಂಗ್ ಮತ್ತು ಪ್ರೆಸ್ಸಿಂಗ್ ಘಟಕಗಳನ್ನು ಗುರುತಿಸಿ, ಈ ಘಟಕಗಳನ್ನು ಮಾರುಕಟ್ಟೆ ಉಪ ಪ್ರಾಂಗಣ ಎಂದು ಗುರುತಿಸಲಾಗಿದೆ.

ರೈತರು ತಾವು ಬೆಳೆದ ಹತ್ತಿಯನ್ನು ಈ ಪ್ರಾಂಗಣದಲ್ಲಿ ತಂದು ಮಾರಾಟ ಮಾಡಬಹುದು. ಈ ಕೇಂದ್ರಗಳಲ್ಲಿ ಹತ್ತಿ ಮಾರಾಟ ಮಾಡಿ, ಉತ್ತಮ ಬೆಲೆ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಮತ್ತು ಪಹಣಿಯನ್ನು ಕೊಂಡೊಯ್ಯಬೇಕು.

ಹತ್ತಿ ಬೆಳೆಗಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರು ತಾವು ಬೆಳೆದ ಹತ್ತಿಯನ್ನು ನೇರವಾಗಿ ಸರ್ಕಾರಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಮಾಡುವುದು ಇದರ ಉದ್ದೇಶ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ, ಯಮನಪ್ಪ ಚಿತ್ತಾಪುರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಯೋಜನೆಯಡಿ ಹತ್ತಿ ಖರೀದಿ ಮಾಡುತ್ತಿರುವುದು ಖುಷಿಯ ವಿಚಾರ, ಇತರ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಿದರೆ ರೈತರಿಗೆ ಅನುಕೂಲವಾಗಿದೆ ಎಂದು ರೈತರು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

8 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

15 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

15 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

24 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago