ಯಾವುದೇ ದೂರು ನೀಡದಿದ್ದರೂ ದ್ವೇಶ ಭಾಷಣದ ಮೇಲೆ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸುವ 2022 ರ ಆದೇಶದ ವ್ಯಾಪ್ತಿಯನ್ನು ಸುಪ್ರೀಂಕೋರ್ಟ್ ಇಂದು ವಿಸ್ತರಿಸಿದೆ. ಅದೇ ವೇಳೆ ಪ್ರಕರಣಗಳನ್ನು ದಾಖಲಿಸುವಲ್ಲಿ ವಿಳಂಬವನ್ನು ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಸಿದೆ. ಇದನ್ನು ಗಂಭೀರ ಅಪರಾಧ ಎಂದು ಬಣ್ಣಿಸಿದ ಸುಪ್ರೀಂಕೋರ್ಟ್, ದ್ವೇಷದ ಭಾಷಣವು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ದೇಶಾದ್ಯಂತ ದ್ವೇಷದ ಅಪರಾಧಗಳ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ.
ದ್ವೇಷ ಭಾಷಣ ಅಪರಾಧಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ದ್ವೇಷದ ಭಾಷಣಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಪೀಠವು ಈ ಹಿಂದೆ ಮಹಾರಾಷ್ಟ್ರ ರಾಜ್ಯದಿಂದ ಪ್ರತಿಕ್ರಿಯೆ ಕೇಳಿತ್ತು.
ದ್ವೇಷ ಭಾಷಣ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ಎಫ್ಐಆರ್ ದಾಖಲಿಸಲು ಅಅಕ್ಟೋಬರ್ 21, 2022 ರಂದು ರಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಉತ್ತರಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಮಾತ್ರ ಅನ್ವಯಿಸಲಾಗಿತ್ತು.
ಯಾರೇ ಈ ರೀತಿ ಹೇಳಲಿ ಧರ್ಮವನ್ನು ಲೆಕ್ಕಿಸದೆ ಅಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ನಾವು ಮತ್ತಷ್ಟು ಸ್ಪಷ್ಟಪಡಿಸುತೇವೆ ಇದರಿಂದಾಗಿ ಪೀಠಿಕೆಯಿಂದ ಕಲ್ಪಿಸಲ್ಪಟ್ಟಿರುವ ಭಾರತದ ಜಾತ್ಯತೀತ ಪಾತ್ರವನ್ನು ಸಂರಕ್ಷಿಸಲಾಗಿದ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…