Advertisement
Categories: Uncategorized

ಧರ್ಮವನ್ನು ಲೆಕ್ಕಿಸದೆ ದ್ವೇಷ ಭಾಷಣಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ : ಎಲ್ಲಾ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

Share

ಯಾವುದೇ ದೂರು ನೀಡದಿದ್ದರೂ ದ್ವೇಶ ಭಾಷಣದ ಮೇಲೆ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸುವ 2022 ರ ಆದೇಶದ ವ್ಯಾಪ್ತಿಯನ್ನು ಸುಪ್ರೀಂಕೋರ್ಟ್ ಇಂದು ವಿಸ್ತರಿಸಿದೆ. ಅದೇ ವೇಳೆ ಪ್ರಕರಣಗಳನ್ನು ದಾಖಲಿಸುವಲ್ಲಿ ವಿಳಂಬವನ್ನು ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಸಿದೆ. ಇದನ್ನು ಗಂಭೀರ ಅಪರಾಧ ಎಂದು ಬಣ್ಣಿಸಿದ ಸುಪ್ರೀಂಕೋರ್ಟ್, ದ್ವೇಷದ ಭಾಷಣವು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ದೇಶಾದ್ಯಂತ ದ್ವೇಷದ ಅಪರಾಧಗಳ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ.

ದ್ವೇಷ ಭಾಷಣ ಅಪರಾಧಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ದ್ವೇಷದ ಭಾಷಣಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಪೀಠವು ಈ ಹಿಂದೆ ಮಹಾರಾಷ್ಟ್ರ ರಾಜ್ಯದಿಂದ ಪ್ರತಿಕ್ರಿಯೆ ಕೇಳಿತ್ತು.

ದ್ವೇಷ ಭಾಷಣ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ಅಅಕ್ಟೋಬರ್ 21, 2022 ರಂದು ರಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಉತ್ತರಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಮಾತ್ರ ಅನ್ವಯಿಸಲಾಗಿತ್ತು.

ಯಾರೇ ಈ ರೀತಿ ಹೇಳಲಿ ಧರ್ಮವನ್ನು ಲೆಕ್ಕಿಸದೆ ಅಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ನಾವು ಮತ್ತಷ್ಟು ಸ್ಪಷ್ಟಪಡಿಸುತೇವೆ ಇದರಿಂದಾಗಿ ಪೀಠಿಕೆಯಿಂದ ಕಲ್ಪಿಸಲ್ಪಟ್ಟಿರುವ ಭಾರತದ ಜಾತ್ಯತೀತ ಪಾತ್ರವನ್ನು ಸಂರಕ್ಷಿಸಲಾಗಿದ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

24 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago