ಸುರತ್ಕಲ್ ನ ಜಂಕ್ಷನ್ ಗೆ ವಿನಾಯಕ ದಾಮೋದರ್ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡುವ ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿಯ ಶಿಫಾರಸನ್ನು ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ (MCC) ಅನುಮೋದಿಸಿದೆ.
ನೂತನವಾಗಿ ಆಯ್ಕೆಯಾದ ಮೇಯರ್ ಜಯಾನಂದ ಅಂಚನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯ ನಡಾವಳಿಗಳನ್ನು ಮುಂದಿನ ಕೌನ್ಸಿಲ್ ಸಭೆಯಲ್ಲಿ ಅನುಮೋದಿಸಲಾಗುವುದು. ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು. ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಅಕ್ಟೋಬರ್ 30, 2021 ರಂದು ನಡೆದ ಕೌನ್ಸಿಲ್ ಸಭೆಯಲ್ಲಿ, ಈ ಪ್ರಸ್ತಾಪವನ್ನು ಸ್ಥಾಯಿ ಸಮಿತಿಗೆ ಕಳುಹಿಸಲಾಗಿತ್ತು.
ಫೆಬ್ರವರಿ 15 ರಂದು ಸ್ಥಾಯಿ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದ್ದರು ಮತ್ತು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಕೌನ್ಸಿಲ್ ಗೆ ಶಿಫಾರಸ್ಸು ಮಾಡಲು ನಿರ್ಧರಿಸಿದ್ದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…