ಸುರತ್ಕಲ್ ನ ಜಂಕ್ಷನ್ ಗೆ ವಿನಾಯಕ ದಾಮೋದರ್ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡುವ ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿಯ ಶಿಫಾರಸನ್ನು ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ (MCC) ಅನುಮೋದಿಸಿದೆ.
ನೂತನವಾಗಿ ಆಯ್ಕೆಯಾದ ಮೇಯರ್ ಜಯಾನಂದ ಅಂಚನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯ ನಡಾವಳಿಗಳನ್ನು ಮುಂದಿನ ಕೌನ್ಸಿಲ್ ಸಭೆಯಲ್ಲಿ ಅನುಮೋದಿಸಲಾಗುವುದು. ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು. ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಅಕ್ಟೋಬರ್ 30, 2021 ರಂದು ನಡೆದ ಕೌನ್ಸಿಲ್ ಸಭೆಯಲ್ಲಿ, ಈ ಪ್ರಸ್ತಾಪವನ್ನು ಸ್ಥಾಯಿ ಸಮಿತಿಗೆ ಕಳುಹಿಸಲಾಗಿತ್ತು.
ಫೆಬ್ರವರಿ 15 ರಂದು ಸ್ಥಾಯಿ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದ್ದರು ಮತ್ತು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಕೌನ್ಸಿಲ್ ಗೆ ಶಿಫಾರಸ್ಸು ಮಾಡಲು ನಿರ್ಧರಿಸಿದ್ದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…