ಸುರತ್ಕಲ್ ನ ಜಂಕ್ಷನ್ ಗೆ ವಿನಾಯಕ ದಾಮೋದರ್ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡುವ ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿಯ ಶಿಫಾರಸನ್ನು ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ (MCC) ಅನುಮೋದಿಸಿದೆ.
ನೂತನವಾಗಿ ಆಯ್ಕೆಯಾದ ಮೇಯರ್ ಜಯಾನಂದ ಅಂಚನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯ ನಡಾವಳಿಗಳನ್ನು ಮುಂದಿನ ಕೌನ್ಸಿಲ್ ಸಭೆಯಲ್ಲಿ ಅನುಮೋದಿಸಲಾಗುವುದು. ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು. ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಅಕ್ಟೋಬರ್ 30, 2021 ರಂದು ನಡೆದ ಕೌನ್ಸಿಲ್ ಸಭೆಯಲ್ಲಿ, ಈ ಪ್ರಸ್ತಾಪವನ್ನು ಸ್ಥಾಯಿ ಸಮಿತಿಗೆ ಕಳುಹಿಸಲಾಗಿತ್ತು.
ಫೆಬ್ರವರಿ 15 ರಂದು ಸ್ಥಾಯಿ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದ್ದರು ಮತ್ತು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಕೌನ್ಸಿಲ್ ಗೆ ಶಿಫಾರಸ್ಸು ಮಾಡಲು ನಿರ್ಧರಿಸಿದ್ದರು.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…