ಸುರತ್ಕಲ್ ನ ಜಂಕ್ಷನ್ ಗೆ ವಿನಾಯಕ ದಾಮೋದರ್ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡುವ ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿಯ ಶಿಫಾರಸನ್ನು ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ (MCC) ಅನುಮೋದಿಸಿದೆ.
ನೂತನವಾಗಿ ಆಯ್ಕೆಯಾದ ಮೇಯರ್ ಜಯಾನಂದ ಅಂಚನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯ ನಡಾವಳಿಗಳನ್ನು ಮುಂದಿನ ಕೌನ್ಸಿಲ್ ಸಭೆಯಲ್ಲಿ ಅನುಮೋದಿಸಲಾಗುವುದು. ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು. ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಅಕ್ಟೋಬರ್ 30, 2021 ರಂದು ನಡೆದ ಕೌನ್ಸಿಲ್ ಸಭೆಯಲ್ಲಿ, ಈ ಪ್ರಸ್ತಾಪವನ್ನು ಸ್ಥಾಯಿ ಸಮಿತಿಗೆ ಕಳುಹಿಸಲಾಗಿತ್ತು.
ಫೆಬ್ರವರಿ 15 ರಂದು ಸ್ಥಾಯಿ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದ್ದರು ಮತ್ತು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಕೌನ್ಸಿಲ್ ಗೆ ಶಿಫಾರಸ್ಸು ಮಾಡಲು ನಿರ್ಧರಿಸಿದ್ದರು.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…