Advertisement
ಸುದ್ದಿಗಳು

ವಂದೇ ಭಾರತ್ ರೈಲು ಓಡಿಸಿದ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ : ಸುರೇಖಾ ಯಾದವ್ ದೇಶದ ಹೆಮ್ಮೆ

Share

ಮಹಿಳೆಯರು ಯಾವುದೇ ಕ್ಷೇತ್ರವಾದರೂ ಸೈ. ತಮ್ಮ ಸಾಮರ್ಥ್ಯವನ್ನು ತೋರಿಸಲು ಸಿದ್ಧ. ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಕುರಿತು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದ್ದು, ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸೆಮಿ ಹೈಸ್ಪೀಡ್ ರೈಲನ್ನು ಸುರೇಖಾ ಯಾದವ್ ಅವರು ಪೈಲಟ್ ಮಾಡಿದರು. ರೈಲು ಮಾರ್ಚ್ 13 ರಂದು ಸರಿಯಾದ ಸಮಯಕ್ಕೆ ಸೊಲ್ಲಾಪುರ ನಿಲ್ದಾಣದಿಂದ ಹೊರಟಿತು ಮತ್ತು ನಿಗದಿತ ಸಮಯಕ್ಕೆ ಆಗಮನಕ್ಕೆ ಐದು ನಿಮಿಷಗಳ ಮೊದಲು CSMT ತಲುಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

450-ಕಿಮೀ ದೂರದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ, ಸುರೇಖಾ ಯಾದವ್ ಅವರನ್ನು CSMT ನಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 8 ರಲ್ಲಿ ಸನ್ಮಾನಿಸಲಾಯಿತು. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ  ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ‘ವಂದೇ ಭಾರತ್ – ನಾರಿ ಶಕ್ತಿಯಿಂದ ನಡೆಸಲ್ಪಡುತ್ತಿದೆ. ಶ್ರೀಮತಿ ಸುರೇಖಾ ಯಾದವ್, ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್” ಎಂದು ಟ್ವೀಟ್ ಮಾಡಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್ ಆಗುವ ಮೂಲಕ ಸುರೇಖಾ ಯಾದವ್ ತಮ್ಮ ಕೇಂದ್ರ ರೈಲ್ವೆಯ ಹಿರಿಮೆಗೆ ಮತ್ತೊಂದು ಗರಿಯನ್ನು ಮೂಡಿಸಿಕೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಹೇಳಿದೆ.

ವೇಗದ ರೈಲು, ಸುಧಾರಿತ ತಂತ್ರಜ್ಞಾನ: ಸುರೇಖಾ ಯಾದವ್
ಅತ್ಯಾಧುನಿಕ ವಂದೇ ಭಾರತ್ ರೈಲು ಚಾಲನೆಯ ಮೊದಲ ಅನುಭವದ ಬಗ್ಗೆ ಸುರೇಖಾ ಯಾದವ್ ಅವರನ್ನು ಕೇಳಿದಾಗ, “ವಂದೇ ಭಾರತ್ ವೇಗದ ರೈಲು, ಸುಧಾರಿತ ತಂತ್ರಜ್ಞಾನವನ್ನು ಹೊಂದಿದೆ. ಆದ್ದರಿಂದ ಸಾಂಪ್ರದಾಯಿಕ ರೈಲುಗಳಿಗೆ ಹೋಲಿಸಿದರೆ ಹೆಚ್ಚು ಜಾಗರೂಕತೆಯ ಅಗತ್ಯವಿದೆ. ವಂದೇ ಭಾರತ್ ರೈಲನ್ನು ಚಲಾಯಿಸಲು ನೀಡಿದ ಅವಕಾಶಕ್ಕಾಗಿ ಅವರು ಕೃತಜ್ಞತೆ” ಎಂದು ಹೇಳಿದ್ದಾರೆ.

ಯಾರು ಈ ಸುರೇಖಾ ಯಾದವ್?: 
ಪಶ್ಚಿಮ ಮಹಾರಾಷ್ಟ್ರದ ಸತಾರಾ ಮೂಲದವರಾಗಿರುವ ಸುರೇಖಾ ಯಾದವ್ ಅವರು 1988 ರಲ್ಲಿ ಭಾರತದ ಮೊದಲ ಮಹಿಳಾ ರೈಲು ಚಾಲಕರಾದರು. ಇಲಾಖೆಯಲ್ಲಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಗಾಗಿ ಈವರೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅವರು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಸುರೇಖಾ ಅವರು ಸೆಂಟ್ರಲ್ ರೈಲ್ವೆಗೆ ಸೇರುವ ಮೊದಲು ಎಲೆಕ್ನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪಡೆದಿದ್ದರು. ವಂದೇ ಭಾರತ್ ರೈಲಿನಲ್ಲಿ ಚಾಲಕರಾಗಿ ನಿಯೋಜನೆಗೊಳ್ಳುವ ಮೊದಲು, ಅವರು ಫೆಬ್ರವರಿ 2023 ರಲ್ಲಿ ರೈಲ್ವೇ ಇನ್ಸಿಟ್ಯೂಟ್ ವಡೋದರಾದಲ್ಲಿ ತರಬೇತಿ ಪೂರ್ಣಗೊಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

14 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago