ಸುದ್ದಿಗಳು

ವಂದೇ ಭಾರತ್ ರೈಲು ಓಡಿಸಿದ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ : ಸುರೇಖಾ ಯಾದವ್ ದೇಶದ ಹೆಮ್ಮೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಿಳೆಯರು ಯಾವುದೇ ಕ್ಷೇತ್ರವಾದರೂ ಸೈ. ತಮ್ಮ ಸಾಮರ್ಥ್ಯವನ್ನು ತೋರಿಸಲು ಸಿದ್ಧ. ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Advertisement
Advertisement

ಈ ಕುರಿತು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದ್ದು, ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸೆಮಿ ಹೈಸ್ಪೀಡ್ ರೈಲನ್ನು ಸುರೇಖಾ ಯಾದವ್ ಅವರು ಪೈಲಟ್ ಮಾಡಿದರು. ರೈಲು ಮಾರ್ಚ್ 13 ರಂದು ಸರಿಯಾದ ಸಮಯಕ್ಕೆ ಸೊಲ್ಲಾಪುರ ನಿಲ್ದಾಣದಿಂದ ಹೊರಟಿತು ಮತ್ತು ನಿಗದಿತ ಸಮಯಕ್ಕೆ ಆಗಮನಕ್ಕೆ ಐದು ನಿಮಿಷಗಳ ಮೊದಲು CSMT ತಲುಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

450-ಕಿಮೀ ದೂರದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ, ಸುರೇಖಾ ಯಾದವ್ ಅವರನ್ನು CSMT ನಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 8 ರಲ್ಲಿ ಸನ್ಮಾನಿಸಲಾಯಿತು. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ  ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ‘ವಂದೇ ಭಾರತ್ – ನಾರಿ ಶಕ್ತಿಯಿಂದ ನಡೆಸಲ್ಪಡುತ್ತಿದೆ. ಶ್ರೀಮತಿ ಸುರೇಖಾ ಯಾದವ್, ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್” ಎಂದು ಟ್ವೀಟ್ ಮಾಡಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್ ಆಗುವ ಮೂಲಕ ಸುರೇಖಾ ಯಾದವ್ ತಮ್ಮ ಕೇಂದ್ರ ರೈಲ್ವೆಯ ಹಿರಿಮೆಗೆ ಮತ್ತೊಂದು ಗರಿಯನ್ನು ಮೂಡಿಸಿಕೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಹೇಳಿದೆ.

ವೇಗದ ರೈಲು, ಸುಧಾರಿತ ತಂತ್ರಜ್ಞಾನ: ಸುರೇಖಾ ಯಾದವ್
ಅತ್ಯಾಧುನಿಕ ವಂದೇ ಭಾರತ್ ರೈಲು ಚಾಲನೆಯ ಮೊದಲ ಅನುಭವದ ಬಗ್ಗೆ ಸುರೇಖಾ ಯಾದವ್ ಅವರನ್ನು ಕೇಳಿದಾಗ, “ವಂದೇ ಭಾರತ್ ವೇಗದ ರೈಲು, ಸುಧಾರಿತ ತಂತ್ರಜ್ಞಾನವನ್ನು ಹೊಂದಿದೆ. ಆದ್ದರಿಂದ ಸಾಂಪ್ರದಾಯಿಕ ರೈಲುಗಳಿಗೆ ಹೋಲಿಸಿದರೆ ಹೆಚ್ಚು ಜಾಗರೂಕತೆಯ ಅಗತ್ಯವಿದೆ. ವಂದೇ ಭಾರತ್ ರೈಲನ್ನು ಚಲಾಯಿಸಲು ನೀಡಿದ ಅವಕಾಶಕ್ಕಾಗಿ ಅವರು ಕೃತಜ್ಞತೆ” ಎಂದು ಹೇಳಿದ್ದಾರೆ.

Advertisement

ಯಾರು ಈ ಸುರೇಖಾ ಯಾದವ್?: 
ಪಶ್ಚಿಮ ಮಹಾರಾಷ್ಟ್ರದ ಸತಾರಾ ಮೂಲದವರಾಗಿರುವ ಸುರೇಖಾ ಯಾದವ್ ಅವರು 1988 ರಲ್ಲಿ ಭಾರತದ ಮೊದಲ ಮಹಿಳಾ ರೈಲು ಚಾಲಕರಾದರು. ಇಲಾಖೆಯಲ್ಲಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಗಾಗಿ ಈವರೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅವರು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಸುರೇಖಾ ಅವರು ಸೆಂಟ್ರಲ್ ರೈಲ್ವೆಗೆ ಸೇರುವ ಮೊದಲು ಎಲೆಕ್ನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪಡೆದಿದ್ದರು. ವಂದೇ ಭಾರತ್ ರೈಲಿನಲ್ಲಿ ಚಾಲಕರಾಗಿ ನಿಯೋಜನೆಗೊಳ್ಳುವ ಮೊದಲು, ಅವರು ಫೆಬ್ರವರಿ 2023 ರಲ್ಲಿ ರೈಲ್ವೇ ಇನ್ಸಿಟ್ಯೂಟ್ ವಡೋದರಾದಲ್ಲಿ ತರಬೇತಿ ಪೂರ್ಣಗೊಳಿಸಿದ್ದಾರೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಷಾಢ ಮಾಸದಲ್ಲಿ ಶಕ್ತಿದೇವತೆಯ ಉಪಾಸನೆ ಏಕೆ ಅಗತ್ಯ..?

ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…

5 hours ago

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…

5 hours ago

ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…

6 hours ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

8 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

8 hours ago