Advertisement
ಸುದ್ದಿಗಳು

ವಂದೇ ಭಾರತ್ ರೈಲು ಓಡಿಸಿದ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ : ಸುರೇಖಾ ಯಾದವ್ ದೇಶದ ಹೆಮ್ಮೆ

Share

ಮಹಿಳೆಯರು ಯಾವುದೇ ಕ್ಷೇತ್ರವಾದರೂ ಸೈ. ತಮ್ಮ ಸಾಮರ್ಥ್ಯವನ್ನು ತೋರಿಸಲು ಸಿದ್ಧ. ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಕುರಿತು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದ್ದು, ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸೆಮಿ ಹೈಸ್ಪೀಡ್ ರೈಲನ್ನು ಸುರೇಖಾ ಯಾದವ್ ಅವರು ಪೈಲಟ್ ಮಾಡಿದರು. ರೈಲು ಮಾರ್ಚ್ 13 ರಂದು ಸರಿಯಾದ ಸಮಯಕ್ಕೆ ಸೊಲ್ಲಾಪುರ ನಿಲ್ದಾಣದಿಂದ ಹೊರಟಿತು ಮತ್ತು ನಿಗದಿತ ಸಮಯಕ್ಕೆ ಆಗಮನಕ್ಕೆ ಐದು ನಿಮಿಷಗಳ ಮೊದಲು CSMT ತಲುಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

450-ಕಿಮೀ ದೂರದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ, ಸುರೇಖಾ ಯಾದವ್ ಅವರನ್ನು CSMT ನಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 8 ರಲ್ಲಿ ಸನ್ಮಾನಿಸಲಾಯಿತು. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ  ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ‘ವಂದೇ ಭಾರತ್ – ನಾರಿ ಶಕ್ತಿಯಿಂದ ನಡೆಸಲ್ಪಡುತ್ತಿದೆ. ಶ್ರೀಮತಿ ಸುರೇಖಾ ಯಾದವ್, ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್” ಎಂದು ಟ್ವೀಟ್ ಮಾಡಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್ ಆಗುವ ಮೂಲಕ ಸುರೇಖಾ ಯಾದವ್ ತಮ್ಮ ಕೇಂದ್ರ ರೈಲ್ವೆಯ ಹಿರಿಮೆಗೆ ಮತ್ತೊಂದು ಗರಿಯನ್ನು ಮೂಡಿಸಿಕೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಹೇಳಿದೆ.

ವೇಗದ ರೈಲು, ಸುಧಾರಿತ ತಂತ್ರಜ್ಞಾನ: ಸುರೇಖಾ ಯಾದವ್
ಅತ್ಯಾಧುನಿಕ ವಂದೇ ಭಾರತ್ ರೈಲು ಚಾಲನೆಯ ಮೊದಲ ಅನುಭವದ ಬಗ್ಗೆ ಸುರೇಖಾ ಯಾದವ್ ಅವರನ್ನು ಕೇಳಿದಾಗ, “ವಂದೇ ಭಾರತ್ ವೇಗದ ರೈಲು, ಸುಧಾರಿತ ತಂತ್ರಜ್ಞಾನವನ್ನು ಹೊಂದಿದೆ. ಆದ್ದರಿಂದ ಸಾಂಪ್ರದಾಯಿಕ ರೈಲುಗಳಿಗೆ ಹೋಲಿಸಿದರೆ ಹೆಚ್ಚು ಜಾಗರೂಕತೆಯ ಅಗತ್ಯವಿದೆ. ವಂದೇ ಭಾರತ್ ರೈಲನ್ನು ಚಲಾಯಿಸಲು ನೀಡಿದ ಅವಕಾಶಕ್ಕಾಗಿ ಅವರು ಕೃತಜ್ಞತೆ” ಎಂದು ಹೇಳಿದ್ದಾರೆ.

ಯಾರು ಈ ಸುರೇಖಾ ಯಾದವ್?: 
ಪಶ್ಚಿಮ ಮಹಾರಾಷ್ಟ್ರದ ಸತಾರಾ ಮೂಲದವರಾಗಿರುವ ಸುರೇಖಾ ಯಾದವ್ ಅವರು 1988 ರಲ್ಲಿ ಭಾರತದ ಮೊದಲ ಮಹಿಳಾ ರೈಲು ಚಾಲಕರಾದರು. ಇಲಾಖೆಯಲ್ಲಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಗಾಗಿ ಈವರೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅವರು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಸುರೇಖಾ ಅವರು ಸೆಂಟ್ರಲ್ ರೈಲ್ವೆಗೆ ಸೇರುವ ಮೊದಲು ಎಲೆಕ್ನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪಡೆದಿದ್ದರು. ವಂದೇ ಭಾರತ್ ರೈಲಿನಲ್ಲಿ ಚಾಲಕರಾಗಿ ನಿಯೋಜನೆಗೊಳ್ಳುವ ಮೊದಲು, ಅವರು ಫೆಬ್ರವರಿ 2023 ರಲ್ಲಿ ರೈಲ್ವೇ ಇನ್ಸಿಟ್ಯೂಟ್ ವಡೋದರಾದಲ್ಲಿ ತರಬೇತಿ ಪೂರ್ಣಗೊಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago